ಪ್ರಣಬ್ ಮುಖರ್ಜಿ 
ದೇಶ

ದೇಶದಲ್ಲಿ ಸಾಮರಸ್ಯ ಕಾಪಾಡಿ: ಪ್ರಣಬ್ ಮುಖರ್ಜಿ

ಭಾರತದ ಸಂಸ್ಕೃತಿಗೆ ಧಕ್ಕೆ ತರುವಂಥಾ ಘಟನೆಗಳಿಗೆ ನಾವು ಆಸ್ಪದಕೊಡುವುದಿಲ್ಲ, ವೈವಿಧ್ಯತೆಯಲ್ಲಿ ಏಕತೆಯನ್ನು ಮೆರೆಯುವ...

ನವದೆಹಲಿ: ಭಾರತದ ಸಂಸ್ಕೃತಿಗೆ ಧಕ್ಕೆ ತರುವಂಥಾ ಘಟನೆಗಳಿಗೆ ನಾವು ಆಸ್ಪದಕೊಡುವುದಿಲ್ಲ, ವೈವಿಧ್ಯತೆಯಲ್ಲಿ ಏಕತೆಯನ್ನು ಮೆರೆಯುವ ದೇಶ ನಮ್ಮದು. ನಾವು ಪರಸ್ಪರ ಸಹಕಾರ, ಸಾಮರಸ್ಯದಿಂದ ಬಾಳಿ ಬದುಕಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೇಳಿದ್ದಾರೆ.
ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಜನರು ಸಾಮರಸ್ಯ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ದಾದ್ರಿ ಘಟನೆಯ ಬಗ್ಗೆ ಖೇದ ವ್ಯಕ್ತ ಪಡಿಸಿದ ಮುಖರ್ಜಿ, ನಮ್ಮ ಹಳೇ ಮೌಲ್ಯಗಳು ಈಗ ನಶಿಸಿ ಹೋಗುತ್ತಿವೆ. ನಮ್ಮ ಪ್ರಜಾಪ್ರಭುತ್ವಕ್ಕೆ ಅದರದ್ದೇ ಆದ ಗೌರವವಿದೆ. ಅದನ್ನು ಮನಸ್ಸಲ್ಲಿಟ್ಟುಕೊಂಡರೆ ನಾವು ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಬಹುದು. 
ಗೋಮಾಂಸ ಭಕ್ಷಿಸಿದ್ದಾನೆ ಎಂಬ ಸಂದೇಹದಡಿಯಲ್ಲಿ ಉತ್ತರ ಪ್ರದೇಶದ ದಾದ್ರಿಯಲ್ಲಿ 52 ರ ಹರೆಯದ ಮೊಹಮ್ಮದ್ ಅಖ್ಲಾಕ್ ಎಂಬಾತನನ್ನು ಹೊಡೆದು ಸಾಯಿಸಲಾಗಿತ್ತು. ಈ ಘಟನೆಯ ಬಗ್ಗೆ ರಾಜಕಾರಣಿಗಳು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದೂ ವಿವಾದ ಸೃಷ್ಟಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!