ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ) 
ದೇಶ

ದಾದ್ರಿಯಲ್ಲಿ ಹಿಂದೂಗಳಿಗೆ 'ಗನ್' ವಿತರಿಸಲು ಮುಂದಾದ ಯೋಗಿ ಬೆಂಬಲಿಗರು

ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣಕ್ಕೆ ಕೋಮು ಬಣ್ಣ ತುಂಬಲು ಯತ್ನ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಬಿಸಾಡ ಗ್ರಾಮದಲ್ಲಿರುವ ಹಿಂದೂಗಳಿಗೆ ಬುಧವಾರ...

ದಾದ್ರಿ: ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣಕ್ಕೆ ಕೋಮು ಬಣ್ಣ ತುಂಬಲು ಯತ್ನ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಬಿಸಾಡ ಗ್ರಾಮದಲ್ಲಿರುವ ಹಿಂದೂಗಳಿಗೆ ಬುಧವಾರ 'ಗನ್' ವಿತರಿಸಲು ಮುಂದಾಗಿದ್ದು ಇದೀಗ ಹಲವು ವಿವಾದಗಳಿಗೆ ಕಾರಣವಾಗಿದೆ.

ನಿಷೇಧಾಜ್ಞೆಯ ಮಧ್ಯೆಯೂ ಇಂದು ಬಿಸಾಡ ಗ್ರಾಮಕ್ಕೆ ನುಗ್ಗಲು ಯತ್ನಿಸಿದ ಆದಿತ್ಯನಾಥ್ ನೇತೃತ್ವದ ಬಲಪಂಧೀಯ ಸಂಘಟನೆ ಹಿಂದೂ ಯುವ ವಾಹಿನಿ ಕಾರ್ಯಕರ್ತರು ಅಲ್ಲಿನ ಹಿಂದೂ ನಿವಾಸಿಗಳಿಗೆ ಬಂದೂಕು ವಿತರಿಸಲು ಯತ್ನಿಸಿದರಾದರೂ ಅವರ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದರು.

ಗ್ರಾಮದಲ್ಲಿರುವ ಹಿಂದೂ ಜನರ ಪರಿಸ್ಥಿತಿ ವಿಚಾರಿಸಲು ನಾವು ಹೋದೆವು ಆದರೆ ನಮ್ಮ ಮೇಲೆ ಅಲ್ಲಿನ ಅಧಿಕಾರಿಗಳು ದೌರ್ಜನ್ಯವೆಸಗಿದರು. ಗ್ರಾಮದಲ್ಲಿರುವ ಹಿಂದುಗಳ ರಕ್ಷಣೆಗೆ ನಾವು ನಮ್ಮಿಂದಾಗುವ ಅಲ್ಲಾ ಸಹಾಯವನ್ನು ಮಾಡುತ್ತೇವೆ. ಹಿಂದುಗಳ ರಕ್ಷಣೆಗೆ ತನ್-ಮನ್-ಧನ್-ಗನ್' ಎಲ್ಲವನ್ನು ನೀಡಿವೆವು ಎಂದು ಕಾರ್ಯಕರ್ತರಲ್ಲೊಬ್ಬರಾಗಿದ್ದ ಜಿತೇಂದರ್ ತ್ಯಾಗಿ ಎಂಬುವವರು ಹೇಳಿಕೊಂಡಿದ್ದಾರೆ.

ಇದೇ ವೇಳೆ ಸೆ.28 ರಂದು ಹತ್ಯೆಗೀಡಾದ ವ್ಯಕ್ತಿ ಅಖ್ಲಾಕ್ ಕುರಿತಂತೆ ವಿಷಾದ ವ್ಯಕ್ತಪಡಿಸಿದ ಅವರು, ಪ್ರಕರಣವನ್ನು ಸಿಬಿಐ ವಹಿಸುವಂತೆ ಆಗ್ರಹಿಸಿದ್ದಾರೆ. ಹಸುವನ್ನು ಸಾಯಿಸಿದ ಮುಸ್ಲಿಂ ವ್ಯಕ್ತಿಗೆ ಸರ್ಕಾರ ಪರಿಹಾರ ಧನವನ್ನು ಘೋಷಿಸಿದೆ. ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆ ವೇಳೆ ಸಾವನ್ನಪ್ಪಿದ್ದ ಹಿಂದೂ ಜೈ ಪ್ರಕಾಶ್ ಗೇಗೆ ಸರ್ಕಾರ ಪರಿಹಾರ ಧನವನ್ನು ಘೋಷಿಸಲಿಲ್ಲ. ಸರ್ಕಾರವೇನು ತನ್ನ ಕೈಯಿಂದ ಹಣವನ್ನು ನೀಡುತ್ತಿದೆಯೇ. ಮುಸ್ಲಿಮರಿಗೆ ಮಾತ್ರ ಸರ್ಕಾರ ಸಹಾಯ ಮಾಡುವುದೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT