ಸೂರಜ್ ರಮೇಶ್ ಪಾರ್ಮರ್( ಫೋಟೋ ಕೃಪೆ- ಮಿಡ್ ಡೇ) 
ದೇಶ

ಆರ್ಥಿಕ ಸಂಕಷ್ಟದಿಂದ ನೊಂದ ಥಾಣೆ ಬಿಲ್ಡರ್ ಸಂಘದ ಅಧ್ಯಕ್ಷ ಆತ್ಮಹತ್ಯೆ

ತೀವ್ರ ಆರ್ಥಿಕ ಮುಗ್ಗಟ್ಟಿನಂದ ಮನನೊಂದಿದ್ದ ಬಿಲ್ಡರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಥಾಣೆಯಲ್ಲಿ ನಡೆದಿದೆ.

ಮುಂಬಯಿ: ತೀವ್ರ ಆರ್ಥಿಕ ಮುಗ್ಗಟ್ಟಿನಂದ ಮನನೊಂದಿದ್ದ ಬಿಲ್ಡರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಥಾಣೆಯಲ್ಲಿ ನಡೆದಿದೆ.

ಕಾಸ್ಮೋಸ್ ಗ್ರೂಪ್ ನ ಅಧ್ಯಕ್ಷ ಸೂರಜ್ ರಮೇಶ್ ಪಾರ್ಮರ್ (45) ಮೃತ ದುರ್ದೈವಿ. ಹಲವು ದಿನಗಳಿಂದ ತಲೆದೋರಿದ್ದ ಆರ್ಥಿಕ ಸಂಕಷ್ಟದಿಂದ ತೀವ್ರ ಜುಗುಪ್ಸೆ ಗೊಂಡಿದ್ದ ಸೂರಜ್ ತಾವು ಕೈಗೊಂಡಿದ್ದ ಕಟ್ಟಡ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಬರಬೇಕಾದ ಹಣ ಬಂದಿರಲಿಲ್ಲ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ 15 ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಮಹಾರಾಷ್ಟ್ರ ವಸತಿ ಕೈಗಾರಿಕಾ ಮಂಡಳಿಯ ಅಧ್ಯಕ್ಷರೂ ಆಗಿದ್ದ ಸೂರಜ್ ಪಾರ್ಮರ್ ನಿನ್ನೆ ಮಧ್ಯಾಹ್ನ ತಮ್ಮ ಫ್ಲ್ಯಾಟ್ ಬಳಿ ತೆರಳಿದ್ದರು. ತಾವು ಹೋಗಿದ್ದ ಕಾರಿನ ಚಾಲಕನನ್ನು ಬೇರೆಡೆ ಕಳುಹಿಸಿದ್ದರು. ಜೊತೆಗೆ ಆಫೀಸ್ ಬಾಯ್ ಕರೆದು ಟೀ ತರುವಂತೆ ಹೇಳಿ ಕಳುಹಿಸಿ , ಆತ ವಾಪಸ್ ಬರುವುದರೊಳಗೆ ತಮ್ಮ 32 ಕ್ಯಾಲಿಬರ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಕಾಸರಡಾವ್ಲಿ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT