ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ) 
ದೇಶ

ಮುಜಾಫರ್ ನಗರ ಗಲಭೆಗೂ ದಾದ್ರಿ ಪ್ರಕರಣಕ್ಕೂ ಸಂಬಂಧವಿದೆ: ಮುಲಾಯಂ ಸಿಂಗ್

ದೇಶದಾದ್ಯಂತ ತೀವ್ರ ಸುದ್ದಿ ಮಾಡಿತ್ತಿರುವ ದಾದ್ರಿ ಪ್ರಕರಣಕ್ಕೆ ಇದೀಗ ರಾಜಕೀಯ ಬಣ್ಣ ಬಂದಿದ್ದು, ರಾಜಕೀಯ ನಾಯಕರ ನಡುವೆ ವಾಕ್ಸಮರದ ಕೆಸರೆರಚಾಟ ಆರಂಭವಾಗಿದೆ. ಪ್ರಕರಣ ಸಂಬಂಧ ಇದೀಗ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್...

ಲಖನೌ: ದೇಶದಾದ್ಯಂತ ತೀವ್ರ ಸುದ್ದಿ ಮಾಡಿತ್ತಿರುವ ದಾದ್ರಿ ಪ್ರಕರಣಕ್ಕೆ ಇದೀಗ ರಾಜಕೀಯ ಬಣ್ಣ ಬಂದಿದ್ದು, ರಾಜಕೀಯ ನಾಯಕರ ನಡುವೆ ವಾಕ್ಸಮರದ ಕೆಸರೆರಚಾಟ ಆರಂಭವಾಗಿದೆ. ಪ್ರಕರಣ ಸಂಬಂಧ ಇದೀಗ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು, ಮುಜಾಫರ್ ನಗರದಲ್ಲಿ ನಡೆದ ಗಲಭೆಗೂ ದಾದ್ರಿ ಪ್ರಕರಣಕ್ಕೂ ಒಂದಕ್ಕೊಂದು ಸಂಬಂಧವಿದೆ ಎಂದು ಹೊಸ ವಿವಾದವೊಂದನ್ನು ಗುರುವಾರ ಹುಟ್ಟುಹಾಕಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಮುಜಾಫರ್ ನಗರದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳೇ ಇದೀಗ ದಾದ್ರಿ ಪ್ರಕರಣದಲ್ಲೂ ಭಾಗಿಯಾಗಿರುವ ಸಂಭವವಿದೆ. ಹೀಗಾಗಿ ದಾದ್ರಿ ಪ್ರಕರಣಕ್ಕೂ ಮುಜಾಫರ್ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೂ ಒಂದಕ್ಕೊಂದು ಸಂಬಂಧವಿದೆ. ದಾದ್ರಿ ಪ್ರಕರಣದಲ್ಲಿ ಒಂದೇ ಪಕ್ಷದ ಮೂವರು ವ್ಯಕ್ತಿಗಳು ಭಾಗಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರವನ್ನು ತ್ಯಾಗಮಾಡಲು ನಾವು ಸಿದ್ಧವಿದ್ದೇವೆ. ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ ಸಂಬಂಧಿಸಿ ಉತ್ತರ ಪ್ರದೇಶದ ಪೊಲೀಸರು ಇದೀಗ 9 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಬಂಧಿತ 9 ಮಂದಿಯಲ್ಲಿ 7 ವ್ಯಕ್ತಿಗಳು ಸ್ಥಳೀಯ ಬಿಜೆಪಿ ನಾಯಕನೊಬ್ಬನೊಂದಿಗೆ ಸಂಬಂಧಹೊಂದಿರುವವರಾಗಿದ್ದಾರೆಂಬ ಮಾತುಗಳು ಕೇಳುಬರುತ್ತಿವೆ. ಈ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದು, ಬಿಜೆಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ವ್ಯಕ್ತಪಡಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT