ಮೊಹಮ್ಮದ್ ಅಖ್ಲಾಕ್ ನ ಸಾವಿನ ದುಃಖದಲ್ಲಿರುವ ಕುಟುಂಬಸ್ಥರು 
ದೇಶ

ದಾದ್ರಿ ಹತ್ಯೆ ಪ್ರಕರಣ: ಅಖ್ಲಾಕ್ ಮನೆಯಲ್ಲಿದ್ದದ್ದು ಗೋಮಾಂಸ ಅಲ್ಲ, ಕುರಿ ಮಾಂಸ

ಗೋಮಾ ಮಾಂಸ ಸಂಗ್ರಹಿಸಿ ಆರೋಪದ ಮೇಲೆ ದಾದ್ರಿಯ ಮುಸ್ಲಿಂ ವ್ಯಕ್ತಿ ಮೊಹಮ್ಮದ್ ಅಖ್ಲಾಕ್‌ನನ್ನು ಗುಂಪೊಂದು ಹತ್ಯೆ ಮಾಡಿತ್ತು. ಆದರೆ ಅಖ್ಲಾಕ್ ಮನೆಯಲ್ಲಿದ್ದಿದ್ದು...

ದಾದ್ರಿ: ಗೋಮಾ ಮಾಂಸ ಸಂಗ್ರಹಿಸಿದ ಆರೋಪದ ಮೇಲೆ ದಾದ್ರಿಯ ಮುಸ್ಲಿಂ ವ್ಯಕ್ತಿ ಮೊಹಮ್ಮದ್ ಅಖ್ಲಾಕ್‌ನನ್ನು ಗುಂಪೊಂದು ಹತ್ಯೆ ಮಾಡಿತ್ತು. ಆದರೆ ಅಖ್ಲಾಕ್ ಮನೆಯಲ್ಲಿದ್ದಿದ್ದು ಗೋಮಾಂಸ ಅಲ್ಲ, ಕುರಿ ಮಾಂಸ ಎಂಬ ಸತ್ಯ ಇದೀಗ ಹೊರ ಬಿದ್ದಿದೆ.

ಅಖ್ಲಾಕ್ ಮನೆಯಲ್ಲಿದ್ದ ಮಾಂಸವನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಅಖ್ಲಾಕ್ ಕುಟುಂಬದ ಬೆಂಬಲಕ್ಕೆ ನಿಂತಿದೆ. ಅಖ್ಲಾಕ್ ಕುಟುಂಬ ಅದು ಗೋಮಾಂಸ ಅಲ್ಲ ಕುರಿ ಮಾಂಸ ಎಂದು ಹೇಳಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸೆಪ್ಪೆಂಬರ್ 28ರಂದೇ ಅಖ್ಲಾಕ್ ಮನೆಯಲ್ಲಿದ್ದ ಮಾಂಸದ ಸ್ಯಾಂಪಲ್ ಅನ್ನು ಪರೀಕ್ಷೆಗಾಗಿ ಪಶು ವೈದ್ಯರ ಬಳಿ ತೆಗೆದುಕೊಂಡು ಹೋಗಲಾಗಿತ್ತು. ಈ ಪರೀಕ್ಷೆಯಲ್ಲೂ ಅದು ಗೋಮಾಂಸ ಅಲ್ಲ ಎಂಬುದು ಸಾಬೀತಾಗಿತ್ತು. ಬಳಿಕ ಮತ್ತೊಮ್ಮೆ ಖಚಿತಪಡಿಸಿಕೊಳ್ಳುವುದಕ್ಕಾಗಿ ಪೊಲೀಸರು ಮಾಂಸದ ಸ್ಯಾಂಪಲ್ ಅನ್ನು ಮಥುರಾದ ವಿಧಿ ವಿಜ್ಞಾನದ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಆ ಪ್ರಯೋಗಾಲಯದ ವರದಿಯೂ ಬಂದಿದ್ದು, ಅಲ್ಲೂ ಗೋಮಾಂಸ ಅಲ್ಲ, ಕುರಿ ಮಾಂಸ ಎಂದು ಹೇಳಲಾಗಿದೆ.

ಗೋಮಾಂಸ ಸಂಗ್ರಹಿಸಿದ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣವಿದೀಗ ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸುತ್ತಿದೆ. ಆದರೆ ಕಳೆದ ಐದು ದಶಕಗಳಿಂದ ಶಾತಿಯುತ ಜೀವನ ಮಾಡುತ್ತಿದ್ದ ಅಖ್ಲಾಕ್ ಆಧಾರ ರಹಿತ ವದಂತಿಗೆ ಬಲಿಯಾಗಿರುವುದು ಮಾತ್ರ ದುರದೃಷ್ಟಕರ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!