ಗಿರಿರಾಜ್ ಕಿಶೋರ್ 
ದೇಶ

ಕಲಬುರ್ಗಿ ಹತ್ಯೆ: ಹಿಂದಿ ಲೇಖಕ ಗಿರಿರಾಜ್ ಕಿಶೋರ್ ಖಂಡನೆ

ಕನ್ನಡ ಹಿರಿಯ ಸಂಶೋಧಕ ಡಾ.ಎಂ.ಎಂ. ಕಲರ್ಬುಗಿ ಹತ್ಯೆಯನ್ನು ಹಿಂದಿಯ ಖ್ಯಾತ ಬರಹಗಾರ ಗಿರಿರಾಜ್ ಕಿಶೋರ್...

ಕಾನ್ಪುರ: ಕನ್ನಡ ಹಿರಿಯ ಸಂಶೋಧಕ ಡಾ.ಎಂ.ಎಂ. ಕಲರ್ಬುಗಿ ಹತ್ಯೆಯನ್ನು ಹಿಂದಿಯ ಖ್ಯಾತ ಬರಹಗಾರ ಗಿರಿರಾಜ್ ಕಿಶೋರ್ ಖಂಡಿಸಿದ್ದಾರೆ. 
ಈ ಬಗ್ಗೆ ಸಾಹಿತ್ಯ ಅಕಾಡೆಮಿ ಹೇಳಿಕೆ ನೀಡಬೇಕಾಗಿತ್ತು. ಆದರೆ ಅದರ ಮೌನದಿಂದ ಬರಹಗಾರರ, ಲೇಖಕರ ಸಮುದಾಯಕ್ಕೆ ಬೇಸರವಾಗಿದೆ ಎಂದು ಅವರು ಟೀಕಿಸಿದ್ದಾರೆ. ``ಲೇಖಕರ, ಬರಹಗಾರರ ಸುರಕ್ಷತೆ ಬಗ್ಗೆ ಸಾಹಿತ್ಯ ಅಕಾಡೆಮಿ ಮೌನ ಮುರಿಯಬೇಕು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನವನ್ನು ಈ ಬಗ್ಗೆ ಸೆಳೆಯಲು ಅದು ಪ್ರಯತ್ನ ಮಾಡಬೇಕಿದೆ'' ಎಂದು ಗಿರಿರಾಜ್ ಕಿಶೋರ್ ಪ್ರತಿಪಾದಿಸಿದ್ದಾರೆ. ಲೇಖಕರೆಲ್ಲರೂ ಅಕಾಡೆಮಿಯ ಸ್ವಾತಂತ್ರ್ಯವನ್ನು ಬಲಿಕೊಡುವ ಸಂಚು ಮತ್ತು ಅದನ್ನು ಕೇಸರೀಕರಣಗೊಳಿಸುವ ಪ್ರಯತ್ನವನ್ನು ಖಂಡಿಸಬೇಕು ಎಂದರು. 
ನಯನತಾರಾ ಸೆಹೆಗಲ್ ಮತ್ತು ಅಶೋಕ್ ವಾಜಪೇಯಿ ಪ್ರಶಸ್ತಿ ಹಿಂತಿರುಗಿಸುವ ನಿರ್ಧಾರವನ್ನು ಅವರು ಸಮರ್ಥಿಸಿದ್ದಾರೆ. ಲೇಖಕರ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆಯಂಥ ಘಟನೆಗಳ ಬಗ್ಗೆ ಸರ್ಕಾರ ಮೌನವಾಗಿರುವು ದರಿಂದಲೇ ಪ್ರಶಸ್ತಿ ಹಿಂತಿರುಗಿಸುವಂಥ ಘಟನೆಗಳು ನಡೆದಿವೆ ಎಂದಿದ್ದಾರೆ ಗಿರಿರಾಜ್ ಕಿಶೋರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT