ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಗಲಭೆ: 21 ಮಂದಿ ಬಂಧನ

ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ಉಂಟಾದ ಗಲಭೆಗೆ ಸಂಬಂಧಪಟ್ಟಂತೆ 21 ಮಂದಿಯನ್ನು ಬಂಧಿಸಲಾಗಿದೆ...

ಮೈನ್ ಪುರಿ: ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ಉಂಟಾದ ಗಲಭೆಗೆ ಸಂಬಂಧಪಟ್ಟಂತೆ 21 ಮಂದಿಯನ್ನು ಬಂಧಿಸಲಾಗಿದೆ.

ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಗಾಳಿ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪೊಂದು ಗಲಾಟೆಯೆಬ್ಬಿಸಿತ್ತು, ಈ ಸಂದರ್ಭದಲ್ಲಿ ಗದ್ದಲ ತಾರಕಕ್ಕೇರಿ ಅನೇಕ ಅಂಗಡಿಗಳು ಮತ್ತು ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಮೈನ್ ಪುರಿ ಜಿಲ್ಲೆ ಇರುವುದು ರಾಜಧಾನಿ ಲಕ್ನೋದಿಂದ 200 ಕಿಮೀ ಮತ್ತು ಆಗ್ರಾದಿಂದ 100 ಕಿ.ಮೀ ದೂರದಲ್ಲಿ. ಇಲ್ಲಿನ ಗ್ರಾಮವೊಂದರ ಮೈದಾನದಲ್ಲಿ ಪ್ರಾಣಿಯ ಮೃತದೇಹವೊಂದರ ತುಂಡೊಂದು ಕಂಡದ್ದರಿಂದ ಉದ್ರಿಕ್ತ ಗುಂಪೊಂದು ಗಲಾಟೆ ಆರಂಭಿಸಿತು. ಆದರೆ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅದು ಹಸುವಿನದ್ದಲ್ಲ ಎಂದು ಗೊತ್ತಾಯಿತು. ನಂತರ ಪರಿಸ್ಥಿತಿ ಹತೋಟಿಗೆ ಬಂತು ಎಂದು ಮೈನ್ ಪುರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗಲಭೆಯಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ. ಆ ಭಾಗದ ಉಪ ಪೊಲೀಸ್ ಮಹಾ ನಿರ್ದೇಶಕರನ್ನು ವಜಾ ಮಾಡಲಾಗಿದೆ. ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ದಾದ್ರಿ ಎಂಬಲ್ಲಿ ಮೊಹಮ್ಮದ್ ಅಕ್ಲಾಕ್ ಎಂಬ ಮುಸಲ್ಮಾನ ವ್ಯಕ್ತಿಯೊಬ್ಬ ಕರುವನ್ನು ಕೊಂದು ಮಾಂಸವನ್ನು ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದನು ಎಂಬ ಗಾಳಿಸುದ್ದಿ ಕೇಳಿ ಉದ್ರಿಕ್ತ ಗುಂಪು ಆತನನ್ನು ಮತ್ತು ಅವನ ಮಗನನ್ನು ಮನೆಯಿಂದ ಹೊರಗೆ ಎಳೆದುತಂದು ಇಟ್ಟಿಗೆಯಿಂದ ಹೊಡೆದಿದ್ದರು. ಘಟನೆಯಲ್ಲಿ ಇಕ್ಲಾಕ್ ಸಾವಿಗೀಡಾದರೆ ದನಿಶ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಇದೀಗ ಮತ್ತೊಂದು ಘಟನೆ ನಡೆದಿರುವುದು ಉತ್ತರ ಪ್ರದೇಶ ರಾಜ್ಯದ ಜನತೆಯಲ್ಲಿ ಸುರಕ್ಷತೆ ಬಗ್ಗೆ ಆತಂಕಕ್ಕೀಡುಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!