ಖುರ್ಷಿದ್ ಕಸೂರಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಶಿವಸೇನೆ ವಿರೋಧ 
ದೇಶ

ಖುರ್ಷಿದ್ ಕಸೂರಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಶಿವಸೇನೆ ವಿರೋಧ

ಘಜಲ್ ಗಾಯಕ ಗುಲಾಂ ಆಲಿ ಸಂಗೀತ ಕಛೇರಿಗೆ ವಿರೋಧ ವ್ಯಕ್ತಪಡಿಸಿ ಹಲವು ಟೀಕೆಗಳಿಗೆ ಗುರಿಯಾಗಿದ್ದ ಶಿವಸೇನೆ ಇದೀಗ ಮಾಜಿ ಪಾಕಿಸ್ತಾನ ವಿದೇಶಾಂಗ ಸಚಿವ ಖುರ್ಷಿದ್ ಮೆಹಮೂದ್ ಕಸೂರಿ ಹಿಂದೆ ಬಿದ್ದುದ್ದು, ಕಸೂರಿ ಅವರ...

ಮುಂಬೈ: ಘಜಲ್ ಗಾಯಕ ಗುಲಾಂ ಆಲಿ ಸಂಗೀತ ಕಛೇರಿಗೆ ವಿರೋಧ ವ್ಯಕ್ತಪಡಿಸಿ ಹಲವು ಟೀಕೆಗಳಿಗೆ ಗುರಿಯಾಗಿದ್ದ ಶಿವಸೇನೆ ಇದೀಗ ಮಾಜಿ ಪಾಕಿಸ್ತಾನ ವಿದೇಶಾಂಗ ಸಚಿವ ಖುರ್ಷಿದ್ ಮೆಹಮೂದ್ ಕಸೂರಿ ಹಿಂದೆ ಬಿದ್ದುದ್ದು, ಕಸೂರಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಭಾನುವಾರ ವಿರೋಧ ವ್ಯಕ್ತಪಡಿಸುತ್ತಿದೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಸಂದರಭದಲ್ಲಿ ಭಾರತ ಪಾಕಿಸ್ತಾನದೊಂದಿಗೆ ಸಾಂಸ್ಕೃತಿಕ ಸಂಬಂಧ ಬೆಳೆಸಲು ಸಾಧ್ಯವಿಲ್ಲ. ಹೀಗಾಗಿ ಅಕ್ಟೋಬರ್ 12 ರಂದು ಮುಂಬೈ ನಲ್ಲಿ ಆಯೋಜಿಸಿರುವ ಪುಸ್ತಕ ಬಿಡುಗಡೆಗೆಗೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ ಎಂದು ಶಿವನೇನೆಯ ನಾಯಕ ಆಶಿಶ್ ಚೆಂಬುರ್ಕರ್ ಹೇಳಿದ್ದಾರೆ.

ಮುಂಬೈ ಆಯೋಜಿಸಲಾಗಿರುವ ಪುಸ್ತಕ ಬಿಡುಗಡೆ ಸಮಾರಂಭವನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಈಗಾಗಲೇ ಕಾರ್ಯಕ್ರಮದ ಆಯೋಜಕರಿಗೆ ಪತ್ರ ಬರೆಯಲಾಗಿದ್ದು, ಪತ್ರವನ್ನು ಆಯೋಜಕರಿಗೆ ತಲುಪಿಸಲಾಗಿದೆ. ಒಂದು ವೇಳೆ ಕಾರ್ಯಕ್ರಮ ನಡೆಸಿದ್ದೇ ಆದರೆ ಪ್ರತಿಭಟನೆ ನಡೆಸುವುದಾಗಿ ಆಯೋಜಕರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ವಿದೇಶಾಂಗ ನೀತಿಗೆ ಸಂಬಂಧಿಸಿದಂತೆ ಖುರ್ಷಿದ್ ಮೆಹಮೂದ್ ಕಸೂರಿ ಅವರು ಬರೆದಿರುವ 'ನೀದರೆ ಎ ಹಾಕ್ ನೋರ್ ಎ ಡವ್ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂಬೈನ ನೆಹರು ಪ್ಲಾನಿಟೋರಿಯಂನಲ್ಲಿ ಅಕ್ಟೋಬರ್ 12 ಆಯೋಜಿಸಲಾಗಿತ್ತು. ಪುಸ್ತಕವನ್ನು ಮೆಹಮೂದ್ ಕಸೂರಿಯವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT