ಮುಂಬೈ: ಶಿವಸೇನಾ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ನನ್ನ ಮನೆ ಬಳಿ ಬಂದು ಮಸಿಯನ್ನು ಬಳಿದಿದ್ದಾರೆಂದು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರ ಮಾಧ್ಯಮ ಸಲಹೆಗಾರರಾಗಿದ್ದಂತ ಸುಧೀಂದ್ರ ಕುಲಕರ್ಣಿ ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಶುಕ್ರವಾರ ನಡೆಯುವಂತಹ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳದಂತೆ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಕುಲಕರ್ಣಿ ಆರೋಪಿಸಿದ್ದಾರೆ.
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭವನ್ನು ಕುಲಕರ್ಣಿ ಅವರ ಸಂಸ್ಥೆ ಆಯೋಜನೆ ಮಾಡಿತ್ತು. ಅದನ್ನು ವಿರೋಧಿಸಿ ಶಿವನಸೇನಾ ಕಾರ್ಯಕರ್ತರು ಈ ಕೃತ್ಯವನ್ನು ಮಾಡಿದ್ದಾರೆ ಎನ್ನುವ ಆರೋಪವನ್ನು ಮಾಡಿದ್ದಾರೆ. ಅವರ ಮನೆಯ ಮುಂಬಾಗಿಲಿಗೆ ಬಂದಂತಹ ಶಿವಸೇನೆ ಕಾರ್ಯಕರ್ತರ ತಂಡ ಅವರ ಮುಖಕ್ಕೆ ಮಸಿಯನ್ನು ಸುರಿದು ಅಲ್ಲಿಂದ ಪರಾರಿಯಾಗಿದ್ದಾರೆ.
ನನ್ನ ಮುಖಕ್ಕೆ ಮಸಿ ಬಳಿದ ಹಾಗೆ, ಇವರು ನನ್ನ ಸಿದ್ಧಾಂತಗಳಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ದೂರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos