ಸುಧೀಂದ್ರ ಕುಲಕರ್ಣಿ 
ದೇಶ

ಶಿವಸೇನೆಯವರು ನನ್ನ ಮುಖಕ್ಕೆ ಮಸಿ ಬಳಿದರು: ಸುದೀಂದ್ರ ಕುಲಕರ್ಣಿ ಆರೋಪ

ಶಿವಸೇನಾ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ನನ್ನ ಮನೆ ಬಳಿ ಬಂದು ಮಸಿಯನ್ನು ಬಳಿದಿದ್ದಾರೆಂದು ಮಾಜಿ ಉಪ ಪ್ರಧಾನಿ...

ಮುಂಬೈ: ಶಿವಸೇನಾ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ನನ್ನ ಮನೆ ಬಳಿ ಬಂದು ಮಸಿಯನ್ನು ಬಳಿದಿದ್ದಾರೆಂದು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರ ಮಾಧ್ಯಮ ಸಲಹೆಗಾರರಾಗಿದ್ದಂತ ಸುಧೀಂದ್ರ ಕುಲಕರ್ಣಿ ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಶುಕ್ರವಾರ ನಡೆಯುವಂತಹ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳದಂತೆ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಕುಲಕರ್ಣಿ ಆರೋಪಿಸಿದ್ದಾರೆ. 
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭವನ್ನು ಕುಲಕರ್ಣಿ ಅವರ ಸಂಸ್ಥೆ ಆಯೋಜನೆ ಮಾಡಿತ್ತು. ಅದನ್ನು ವಿರೋಧಿಸಿ ಶಿವನಸೇನಾ ಕಾರ್ಯಕರ್ತರು ಈ ಕೃತ್ಯವನ್ನು ಮಾಡಿದ್ದಾರೆ ಎನ್ನುವ ಆರೋಪವನ್ನು ಮಾಡಿದ್ದಾರೆ. ಅವರ ಮನೆಯ ಮುಂಬಾಗಿಲಿಗೆ ಬಂದಂತಹ ಶಿವಸೇನೆ ಕಾರ್ಯಕರ್ತರ ತಂಡ ಅವರ ಮುಖಕ್ಕೆ ಮಸಿಯನ್ನು ಸುರಿದು ಅಲ್ಲಿಂದ ಪರಾರಿಯಾಗಿದ್ದಾರೆ. 
ನನ್ನ ಮುಖಕ್ಕೆ ಮಸಿ ಬಳಿದ ಹಾಗೆ, ಇವರು ನನ್ನ ಸಿದ್ಧಾಂತಗಳಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ದೂರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT