ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಪ್ರಧಾನಿ 
ದೇಶ

ಭ್ರಷ್ಟಾಚಾರವನ್ನು ರೋಗವೆಂದು ಪರಿಗಣಿಸಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಭ್ರಷ್ಟಾಚಾರ ದೇಶದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದ್ದು, ಅದನ್ನು ಒಂದು ಕಾಯಿಲೆಯಾಗಿ ಪರಿಗಣಿಸಬೇಕು...

ನವದೆಹಲಿ: ಭ್ರಷ್ಟಾಚಾರ ದೇಶದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದ್ದು, ಅದನ್ನು ಒಂದು ಕಾಯಿಲೆಯಾಗಿ ಪರಿಗಣಿಸಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಭ್ರಷ್ಟಾಚಾರ ದೇಶದ ಬೆಳವಣಿಗೆ ಮೇಲೆ ಪರಿಣಾಮ ಬೀರಿ ಸರ್ಕಾರದ ಆದಾಯವನ್ನು ಕುಂಠಿತಗೊಳಿಸುತ್ತದೆ. ಆದಾಯ ಮತ್ತು ಸಂಪತ್ತು ಹಂಚಿಕೆಯಲ್ಲಿ ಅಸಮತೋಲನವನ್ನುಂಟುಮಾಡುತ್ತದೆ. ಇದು ದೇಶದ ಅಭಿವೃದ್ಧಿ ಕುಂಠಿತಕ್ಕೆ ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಜಾಗೃತಿಯನ್ನುಂಟುಮಾಡಿ ಭ್ರಷ್ಟಾಚಾರದ ಪಿಡುಗಿನ ಕುರಿತು ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಬೇಕು ಎಂದು ಹೇಳಿದ್ದಾರೆ. ಅವರು ಅಕ್ಟೋಬರ್ 26ರಿಂದ ಒಂದು ವಾರಗಳ ಕಾಲ ದೇಶಾದ್ಯಂತ ಆಚರಿಸಲಿರುವ ಜಾಗೃತ ಸಪ್ತಾಹದ ಹಿನ್ನೆಲೆಯಲ್ಲಿ ನೀಡಿರುವ ಸಂದೇಶದಲ್ಲಿ ಹೇಳಿದ್ದಾರೆ.

ಭ್ರಷ್ಟಾಚಾರವನ್ನು ಒಂದು ರೋಗವೆಂದು ಪರಿಗಣಿಸಿ ಅದನ್ನು ತಡೆಗಟ್ಟಲು ಶ್ರಮಿಸಬೇಕು ಎಂದರು. ಈ ವರ್ಷ ಕೇಂದ್ರ ಜಾಗೃತ ಆಯೋಗವು ಉತ್ತಮ ಆಡಳಿತಕ್ಕೆ ತಡೆ ಜಾಗೃತಿ ಎಂಬ ಧ್ಯೇಯವನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿದೆ. ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಸರಿಯಾದ ನಿಯಮವನ್ನು ಅಳವಡಿಸಿಕೊಂಡರೆ ಭ್ರಷ್ಟಾಚಾರವನ್ನು ತಡೆಗಟ್ಟಬಹುದು ಎಂದು ರಾಷ್ಟ್ರಪತಿ ತಿಳಿಸಿದರು.

ಜಾಗೃತಿ ತಡೆ ವಿಧಾನದ ಮೂಲಕ ಭ್ರಷ್ಟಾಚಾರವನ್ನು ನಿಗ್ರಹಿಸಬಹುದು ಎಂದು ಉಪ ರಾಷ್ಟ್ಪಪತಿ ಹಮೀದ್ ಅನ್ಸಾರಿ ತಿಳಿಸಿದರು.ಸರ್ಕಾರಿ ಇಲಾಖೆಗಳು, ಸಂಸ್ಥೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ, ದಕ್ಷತೆ ಮತ್ತು ನಿಖರತೆಯನ್ನು ಎಲ್ಲಾ ಹಂತಗಳಲ್ಲಿಯೂ ತರುವ ಮೂಲಕ ಭ್ರಷ್ಟಾಚಾರದ ಪಿಡುಗನ್ನು ತೊಲಗಿಸಬಹುದು ಎಂದರು.

ಈ ಸಂದರ್ಭದಲ್ಲಿ ತಮ್ಮ ಸಂದೇಶ ತಿಳಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ವರ್ಷದ ಜಾಗೃತ ಸಪ್ತಾಹಕ್ಕೆ ಆಯೋಗವು ಆಯ್ಕೆ ಮಾಡಿಕೊಂಡಿರುವ ಧ್ಯೇಯ ಸರ್ಕಾರಿ ಆಡಳಿತದಲ್ಲಿ ಅಕ್ರಮ ತಡೆಗಟ್ಟುವ ಮತ್ತು ಉತ್ತಮ ಆಡಳಿತದ ಕುರಿತು ತಿಳಿಸಿ ಹೇಳುವುದಾಗಿರುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT