ಸತ್ಯಪಾಲ್ ಸಿಂಗ್ 
ದೇಶ

ದಾದ್ರಿ ಪ್ರಕರಣ ಒಂದು ಚಿಕ್ಕ ಘಟನೆ: ಬಿಜೆಪಿ ಸಂಸದ

ದಾದ್ರಿ ಪ್ರಕರಣ ಒಂದು ಚಿಕ್ಕ ಘಟನೆ ಎಂದು ಹೇಳುವ ಮೂಲಕ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಸತ್ಯಪಾಲ್...

ನವದೆಹಲಿ: ದಾದ್ರಿ ಪ್ರಕರಣ ಒಂದು ಚಿಕ್ಕ ಘಟನೆ ಎಂದು ಹೇಳುವ ಮೂಲಕ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಸತ್ಯಪಾಲ್ ಸಿಂಗ್ ವಿವಾದಕ್ಕೆ ಸಿಲುಕಿದ್ದಾರೆ. 
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಹಾಗೂ ಪ್ರಸ್ತುತ ಬಿಜೆಪಿ ಸಂಸದರಾಗಿರುವ ಸತ್ಯಪಾಲ್ ಸಿಂಗ್ ಅವರು, ಇತರ ಆಂತರಿಕ ಭದ್ರತಾ ಸಮಸ್ಯೆಗಳಿಗೆ ಹೋಲಿಸಿಕೊಂಡರೆ, ಭಾರತ ದಾದ್ರಿ ಪ್ರಕರಣದಂತಹ ಚಿಕ್ಕ ಚಿಕ್ಕ ಘಟನೆಗಳನ್ನು ನಿರ್ವಹಣೆ ಮಾಡುವುದರಲ್ಲಿ ಯಶಸ್ಸು ಕಂಡಿದೆ ಎಂದು ಹೇಳಿದ್ದಾರೆ.
ಸತ್ಯಪಾಲ್ ಅವರ ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸತ್ಯಪಾಲ್ ಹೇಳಿಕೆಯನ್ನು ನೋಡಿದರೆ ತಿಳಿಯುತ್ತದೆ ಬಿಜೆಪಿಯ ದೃಷ್ಟಿಕೋನ ಏನು ಎಂಬುದು ಎಂದು ಕಾಂಗ್ರೆಸ್ ಮುಖಂಡ ಅಜಾಯ್ ಕುಮಾರ್ ಕಿಡಿ ಕಾರಿದ್ದಾರೆ.
ಉತ್ತರ ಪ್ರದೇಶ ದಾದ್ರಿ ಎಂಬ ಊರಿನಲ್ಲಿ ಹಸುಗಳನ್ನು ಮುಸ್ಲಿಂ ಕುಟುಂಬವೊಂದು ಹತ್ಯೆ ಮಾಡಿ ಸೇವನೆ ಮಾಡಿದೆ ಎಂದು ಶಂಕಿಸಿದ ಗುಂಪೊಂದು ಮುಸ್ಲಿಂ ಕುಟುಂಬದ ಮೇಲೆ ದಾಳಿ ಮನೆಯಲ್ಲಿದ್ದ ಮಹಮ್ಮದ್ ಇಕ್ಲಾಕ್ (50) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ