ಅಜಯ್ ದೇವಗನ್ 
ದೇಶ

ಅಜಯ್ ದೇವಗನ್ ಚುನಾವಣಾ ರ್ಯಾಲಿಯಲ್ಲಿ ಹಿಂಸಾಚಾರ

ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡಬೇಕಿದ್ದ ಚುನಾವಣಾ ರ್ಯಾಲಿಯೊಂದು ಹಿಂಸಾಚಾರದಲ್ಲಿ ಕೊ ನೆಗೊಂಡ ಘಟನೆ...

ಬಿಹರ್ ಶರಿಫ್: ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡಬೇಕಿದ್ದ ಚುನಾವಣಾ ರ್ಯಾಲಿಯೊಂದು ಹಿಂಸಾಚಾರದಲ್ಲಿ ಕೊ ನೆಗೊಂಡ ಘಟನೆ ಬಿಹಾರದ ನಳಂದ ಜಿಲ್ಲೆಯ ಕೇಂದ್ರ ಸ್ಥಾನ ಬಿಹರ್ ಶರಿಫ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದ ಜಿಲ್ಲೆಯ ಬಿಹರ್ ಶರಿಫ್ ನಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಅವರ ಪರವಾಗಿ ಚುನಾವಣಾ ರ್ಯಾಲಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಅವರು ಬಂದಿದ್ದು ಮಧ್ಯಾಹ್ನ ಒಂದು ಗಂಟೆಗೆ.  ಸಾವಿರಾರು ಜನರು ನೆರೆದಿದ್ದರು.ದೇವಗನ್ ಹೆಲಿಕಾಪ್ಟರ್ ನಲ್ಲಿ ಬರುತ್ತಿದ್ದಾರೆ ಎಂದು ವಿಷಯ ತಿಳಿಯುತ್ತಿದ್ದಂತೆ  ಉದ್ರಿಕ್ತ ಗುಂಪೊಂದು ಕಲ್ಲು ಮತ್ತು ಕುರ್ಚಿಯನ್ನು ಪೊಲೀಸರೆಡೆಗೆ ಎಸೆಯಲು ಪ್ರಾರಂಭಿಸಿತು.
ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.ಈ ವೇಳೆ ಉಂಟಾದ ಗಲಭೆಯಲ್ಲಿ ಕೆಲವು ಪೊಲೀಸರು ಒಳಗೊಂಡು ಸುಮಾರು 12 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ ಕುಮಾರ್ ತಿಳಿಸಿದ್ದಾರೆ.
ಗಲಾಟೆಯಾದ ಹಿನ್ನೆಲೆಯಲ್ಲಿ ಅಜಯ್ ದೇವಗನ್ ಹೆಲಿಕಾಪ್ಟರ್ ನಿಂದ ಇಳಿಯದೆ ಕುಳಿತಲ್ಲಿಂದಲೇ ಜನರೆಡೆಗೆ ಕೈ ಬೀಸಿ ನಿರ್ಗಮಿಸಿದರು.

ಈ ಮೊದಲು ಅಜಯ್ ದೇವಗನ್ ಅವರು ಲಕಿಸರೈ ಮತ್ತು ಖಾಗರಿಯಾ ಕ್ಷೇತ್ರಗಳಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡುವಾಗಲೂ ದುರ್ಘಟನೆಗಳು ನಡೆದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT