ಅಜಯ್ ದೇವಗನ್ 
ದೇಶ

ಅಜಯ್ ದೇವಗನ್ ಚುನಾವಣಾ ರ್ಯಾಲಿಯಲ್ಲಿ ಹಿಂಸಾಚಾರ

ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡಬೇಕಿದ್ದ ಚುನಾವಣಾ ರ್ಯಾಲಿಯೊಂದು ಹಿಂಸಾಚಾರದಲ್ಲಿ ಕೊ ನೆಗೊಂಡ ಘಟನೆ...

ಬಿಹರ್ ಶರಿಫ್: ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡಬೇಕಿದ್ದ ಚುನಾವಣಾ ರ್ಯಾಲಿಯೊಂದು ಹಿಂಸಾಚಾರದಲ್ಲಿ ಕೊ ನೆಗೊಂಡ ಘಟನೆ ಬಿಹಾರದ ನಳಂದ ಜಿಲ್ಲೆಯ ಕೇಂದ್ರ ಸ್ಥಾನ ಬಿಹರ್ ಶರಿಫ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದ ಜಿಲ್ಲೆಯ ಬಿಹರ್ ಶರಿಫ್ ನಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಅವರ ಪರವಾಗಿ ಚುನಾವಣಾ ರ್ಯಾಲಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಭಾಷಣ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಅವರು ಬಂದಿದ್ದು ಮಧ್ಯಾಹ್ನ ಒಂದು ಗಂಟೆಗೆ.  ಸಾವಿರಾರು ಜನರು ನೆರೆದಿದ್ದರು.ದೇವಗನ್ ಹೆಲಿಕಾಪ್ಟರ್ ನಲ್ಲಿ ಬರುತ್ತಿದ್ದಾರೆ ಎಂದು ವಿಷಯ ತಿಳಿಯುತ್ತಿದ್ದಂತೆ  ಉದ್ರಿಕ್ತ ಗುಂಪೊಂದು ಕಲ್ಲು ಮತ್ತು ಕುರ್ಚಿಯನ್ನು ಪೊಲೀಸರೆಡೆಗೆ ಎಸೆಯಲು ಪ್ರಾರಂಭಿಸಿತು.
ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.ಈ ವೇಳೆ ಉಂಟಾದ ಗಲಭೆಯಲ್ಲಿ ಕೆಲವು ಪೊಲೀಸರು ಒಳಗೊಂಡು ಸುಮಾರು 12 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ ಕುಮಾರ್ ತಿಳಿಸಿದ್ದಾರೆ.
ಗಲಾಟೆಯಾದ ಹಿನ್ನೆಲೆಯಲ್ಲಿ ಅಜಯ್ ದೇವಗನ್ ಹೆಲಿಕಾಪ್ಟರ್ ನಿಂದ ಇಳಿಯದೆ ಕುಳಿತಲ್ಲಿಂದಲೇ ಜನರೆಡೆಗೆ ಕೈ ಬೀಸಿ ನಿರ್ಗಮಿಸಿದರು.

ಈ ಮೊದಲು ಅಜಯ್ ದೇವಗನ್ ಅವರು ಲಕಿಸರೈ ಮತ್ತು ಖಾಗರಿಯಾ ಕ್ಷೇತ್ರಗಳಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡುವಾಗಲೂ ದುರ್ಘಟನೆಗಳು ನಡೆದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

ಪಾಕಿಸ್ತಾನಕ್ಕೆ ಮತ್ತೆ ಆಘಾತ, ಬಾಂಗ್ಲಾದೇಶಕ್ಕೆ 2ನೇ ಜಯ: WTC ಅಂಕಪಟ್ಟಿಯಲ್ಲಿ ಭಾರತವನ್ನೇ ಹಿಂದಿಕ್ಕಿದ ಬಾಂಗ್ಲಾ ಟೈಗರ್ಸ್!

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

Twisha Sharma: 'ಮತ್ತೆ ಮರಣೋತ್ತರ ಪರೀಕ್ಷೆ ಇಲ್ಲ' ಎಂದ ಭೋಪಾಲ್ ಕೋರ್ಟ್, ಮೃತದೇಹ ಸ್ವೀಕರಿಸಲು ಕುಟುಂಬ ನಿರಾಕರಣೆ

SCROLL FOR NEXT