ಸುಧೀಂದ್ರ ಕುಲಕರ್ಣಿ 
ದೇಶ

ಸುಧೀಂದ್ರ ಕುಲಕರ್ಣಿಯನ್ನು ಕಸಬ್‌ಗೆ ಹೋಲಿಸಿದ ಶಿವಸೇನೆ

ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಕಾರ್ಯಕ್ರಮ ಆಯೋಜಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ...

ಮುಂಬೈ: ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಕಾರ್ಯಕ್ರಮ ಆಯೋಜಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರ ಆಪ್ತ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಸೋಮವಾರ ಮಸಿ ಬಳೆದಿದ್ದ ಶಿವಸೇನೆ, ಇದೀಗ ಅವರನ್ನು ಅಜ್ಮಲ್ ಕಸಬ್ ಹೋಲಿಸಿದೆ.

ಶಿವಸೇನೆ ಮುಖವಾಣಿ ಸಾಮ್ನಾನದಲ್ಲಿ ಕುಲಕರ್ಣಿಯನ್ನು ತೀವ್ರವಾಗಿ ಖಂಡಿಸಿಲಾಗಿದೆ. ಸುಧೀಂದ್ರ ಕುಲಕರ್ಣಿ ಪಾಕಿಸ್ತಾನಿ ಏಜೆಂಟ್ ಎಂದಿರುವ ಸೇನೆ, ಕುಲಕರ್ಣಿಯಂತಹ ಜನ ಭಾರತದಲ್ಲೇ ಇರಬೇಕಾದರೆ, ಪಾಕಿಸ್ತಾನ ಅಜ್ಮಲ್ ಕಸಬ್‌ನಂತವರನ್ನು ಭಾರತಕ್ಕೆ ಕಳುಹಿಸುವ ಅಗತ್ಯ ಇಲ್ಲ ಎಂದಿದೆ.

ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಶಿವಸೇನೆ, ಮತಕ್ಕಾಗಿ ಲಂಚ ಹಗರಣದಲ್ಲಿ ಸುಧೀಂದ್ರ ಕುಲಕರ್ಣಿಯವರ ಕೈವಾಡ ಇತ್ತು ಎಂದು ಹೇಳಿದೆ.

ಕಸೂರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಿದ ಸುಧೀಂದ್ರ ಕುಲಕರ್ಣಿ ಇದೊಂದು ಉತ್ತಮ ಪಾಠ ಮತ್ತು ಪಾಕಿಸ್ತಾನಿ ಕಲಾವಿದರು ಹಾಗೂ ಗಣ್ಯರ ವಿರುದ್ಧದ ಬಹಿಷ್ಕಾರ ಮುಂದುವರೆಯಲಿದೆ ಎಂದು ಸೇನೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT