ಉದ್ಧವ್ ಠಾಕ್ರೆ ನಿವಾಸದಲ್ಲಿ ಶಿವಸೇನಾ ಕಾರ್ಯಕರ್ತರ ಸಂಭ್ರಮಾಚರಣೆ 
ದೇಶ

ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ ಬಳಿದವರನ್ನು ಅಭಿನಂದಿಸಿದ ಉದ್ಧವ್ ಠಾಕ್ರೆ

ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರ ಆಪ್ತ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಸೋಮವಾರ ಮಸಿ ಬಳೆದಿದ್ದ...

ಮುಂಬೈ: ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರ ಆಪ್ತ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಸೋಮವಾರ ಮಸಿ ಬಳೆದಿದ್ದ ಶಿವಸೇನಾ ಕಾರ್ಯಕರ್ತರ ಕ್ರಮಕ್ಕೆ ಎಲ್ಲೆಡೆ ಟೀಕೆ ಕೇಳಿಬರುತ್ತಿದ್ದರೆ ಇತ್ತ ಉದ್ಧವ್ ಠಾಕ್ರೆ ಅವರನ್ನು ಸನ್ಮಾನಿಸಿದ್ದಾರೆ.

ಸುಧೀಂದ್ರ ಕುಲಕರ್ಣಿ ಅವರ ಮುಖದ ಮೇಲೆ ನಿನ್ನೆ ಮಸಿ ಬಳಿದಿದ್ದ ಆರು ಮಂದಿ ಕಾರ್ಯಕರ್ತರನ್ನು ಮುಂಬೈನ ತಮ್ಮ ನಿವಾಸ ಮಾತೋಶ್ರೀಯಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದ್ದಾರೆ.

ಕಾರ್ಯಕರ್ತರ ಕ್ರಮವನ್ನು ಸಮರ್ಥಿಸಿಕೊಂಡ ಶಿವಸೇನಾ ವಕ್ತಾರೆ ಮನಿಶಾ ಖಾಯಂಡೆ, ಅವರು ದೇಶದ ಒಳಿತಿಗಾಗಿ ಈ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ಸುಧೀಂದ್ರ ಕುಲಕರ್ಣಿಯವರು ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದ್ದಾರೆ. ಪಾಕಿಸ್ತಾನ ಭಾರತದ ಮೇಲೆ ಕಾರ್ಗಿಲ್ ಯುದ್ಧ ಮಾಡಿದ್ದ ಸಂದರ್ಭದಲ್ಲಿ ಖುರ್ಷಿದ್ ಮೊಹಮ್ಮದ್ ಕಸೂರಿಯವರು ಪರ್ವೇಜ್ ಮುಷರಫ್ ಅವರಿಗೆ ಸಲಹಾಗಾರರಾಗಿದ್ದರು ಎಂದರು.

ಕುಲಕರ್ಣಿಯವರ ಮುಖವನ್ನು ಕಪ್ಪು ಮಾಡಿದ್ದು ನಾಗರಿಕ ಪ್ರತಿಭಟನೆ. ಪಾಕಿಸ್ತಾನದ ಖ್ಯಾತ ಗಜಲ್ ಹಾಡುಗಾರ ಗುಲಾಂ ಆಲಿಯವರು ತಮ್ಮ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದರು. ಅಂತಹದೇ ನಿರ್ಧಾರವನ್ನು ಕುಲಕರ್ಣಿಯವರು ತೆಗೆದುಕೊಳ್ಳಬಹುದಾಗಿತ್ತು. ಮಹಾರಾಷ್ಟ್ರ, ಮುಂಬೈ ಮತ್ತು ಇಡೀ ದೇಶದ ಜನತೆ ಶಿವಸೇನೆಯ ಕ್ರಮವನ್ನು ಒಪ್ಪಿಕೊಂಡಿದ್ದಾರೆ ಎಂದು ಮನಿಶಾ ಖಾಯಂಡೆ ಸಮರ್ಥಿಸಿಕೊಂಡಿದ್ದಾರೆ.

ದೇಶಾದ್ಯಂತ ನಮ್ಮ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ದೇಶಪ್ರೇಮದ ಬಗ್ಗೆ ಮಾತನಾಡುವವರು ಬೇರೆ ರೀತಿಯಲ್ಲಿ ಹಣೆಪಟ್ಟಿ ಹಚ್ಚುತ್ತಾರೆ. ಇದು ದೇಶಕ್ಕೆ ತುಂಬಾ ಬೇಸರದ ಸಂಗತಿ ಎಂದು ಮನಿಶಾ ಖಾಯಂಡೆ ನುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT