ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಜಯಾ ಅಕ್ರಮ ಆಸ್ತಿ ಪ್ರಕರಣ ವಿಚಾರಣೆ ನ.23ಕ್ಕೆ ಮುಂದೂಡಿಕೆ

ತಮಿಳುನಾಡು ಸಿಎಂ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ. 23ಕ್ಕೆ ಮುಂದೂಡಿದೆ...

ನವದೆಹಲಿ: ತಮಿಳುನಾಡು ಸಿಎಂ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ. 23ಕ್ಕೆ ಮುಂದೂಡಿದೆ.

ಸೋಮವಾರ ವಿಚಾರಣೆ ವೇಳೆ ಜಯಲಲಿತಾ ಅವರಿಗೆ ಹಣ ನೀಡಿದ ಆರೋಪ ಹೊತ್ತ ಕಂಪನಿಗಳ ಪರವಕೀಲರು ತ್ವರಿತ ವಿಚಾರಣೆಗೆ ಮನವಿ ಮಾಡಿದರು. ಆದರೆ, ಕರ್ನಾಟಕ ಸರ್ಕಾರದ ಪರ ವಕೀಲರು ಜನವರಿ ಅಥವಾ ಫೆಬ್ರವರಿಯಲ್ಲಿ ವಿಚಾರಣೆ ನಡೆಸಬೇಕು ಎಂದು ನ್ಯಾ.ಪಿನಾಕಿ ಚಂದ್ರ ಘೋಷ್ ನೇತೃತ್ವ ನ್ಯಾಪೀಠದ ಮುಂದೆ ಕೋರಿದರು. ವಾದಿ, ಪ್ರತಿವಾದಿಗಳು ಅಗತ್ಯ ದಾಖಲೆ ಸಲ್ಲಿಸಿ, ಅದಕ್ಕೆ ಪ್ರತಿ ದಾಖಲೆ ಒದಗಿಸುವ ಪ್ರಕ್ರಿಯೆಯನ್ನು ನ.23 ರೊಳಗೆ ಪೂರ್ಣಗೊಳಿಸಿ. ನ.23 ರಂದು ವಿಚಾರಣೆ ಯಾವಾಗ ಆರಂಭವಾಗಬೇಕು ಎಂಬುದನ್ನು ನಿರ್ಧರಿಸೋಣ.

ನಂತರ ವಾರಕ್ಕೆ 3 ದಿನ ವಿಚಾರಣೆ ನಡೆಸಬಹುದು ಎಂದು ಹೇಳಿದ ನ್ಯಾಯಮೂರ್ತಿಗಳು ವಿಚಾರಣೆ ಮುಂದೂಡಿದರು. ಈಗ ಕರ್ನಾಟಕ ಸರ್ಕಾರದ ಪರ ವಕೀಲ ಬಿ.ವಿ. ಆಚಾರ್ಯ ಅವರಿಗೆ ದುಶ್ಯಂತ ದವೆ ಅವರು ನೆರವಾಗಲಿದ್ದಾರೆ. ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣ ದಲ್ಲಿ ಕೆಳ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT