ಅನುಪಮ್ ಖೇರ್ 
ದೇಶ

ಸಾಹಿತಿಗಳಿಂದ ಪ್ರಶಸ್ತಿ ವಾಪಸ್ ರಾಜಕೀಯ ಪ್ರೇರಿತ: ಅನುಪಮ್ ಖೇರ್

ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ...

ಮುಂಬೈ: ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು, ಇದೊಂದು ರಾಜಕೀಯ ಪ್ರೇರಿತ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಕೆಟ್ಟ ಹೆಸರು ತರುವ ಉದ್ದೇಶ ಅಷ್ಟೇ ಎಂದಿದ್ದಾರೆ.

'ಇದೊಂದು ರಾಜಕೀಯ ಪ್ರೇರಿತ ಅನಿಸುತ್ತಿದೆ. ಭಾರತದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುತ್ತಿರುವುದು ಇದೇ ಮೊದಲೇನಲ್ಲ' ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

'ಪ್ರಧಾನಿ ಮೋದಿ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಒಂದು ವೇಳೆ ಅವರಿಗೆ ಪ್ರಶಸ್ತಿ ಹಿಂದಿರುಗಿಸುವುದಾದರೆ, ಎಲ್ಲವನ್ನೂ ಏಕೆ ಹಿಂದಿರುಗಿಸಬಾರದು?' ಎಂದು ಪ್ರಶ್ನಿಸಿದ್ದಾರೆ.

ಸಾಹಿತಿಗಳ ಮೇಲಿನ ದಾಳಿಯನ್ನು ಖಂಡಿಸಿ ನಯಂತಾರ ಸೆಹಗಲ್, ಸಾರಾ ಜೋಸೆಫ್, ಉದಯ್ ಪ್ರಕಾಶ್, ಅಶೋಕ್ ವಾಜಪೇಯಿ ಹಾಗೂ ಅರವಿಂದ್ ಮಾಲಗತ್ತಿ ಸೇರಿದಂತೆ ಹಲವು ಲೇಖಕರು ತಮ್ಮ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT