ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ 
ದೇಶ

ಮಂಡಳಿ ವ್ಯವಸ್ಥೆ ಕುರಿತು ಸಲಹೆ ಕೇಳಿರುವ ಸುಪ್ರೀಂ ಕೋರ್ಟ್ ಕ್ರಮದಲ್ಲಿ ತಪ್ಪಾಗಿದೆ: ರವಿಶಂಕರ್ ಪ್ರಸಾದ್

ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರ ನೇಮಕದಲ್ಲಿ ಮಂಡಳಿ ವ್ಯವಸ್ಥೆ ಸುಧಾರಣೆಗೆ ಸಲಹೆ ಕೇಳಲು ಸುಪ್ರೀಂ ಕೋರ್ಟ್...

ನವದೆಹಲಿ: ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರ ನೇಮಕದಲ್ಲಿ ಮಂಡಳಿ ವ್ಯವಸ್ಥೆ ಸುಧಾರಣೆಗೆ ಸಲಹೆ ಕೇಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿರುವ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಇದರಲ್ಲಿ ಏನೋ ತಪ್ಪಾಗಿದೆ ಎಂದು ಹೇಳಿದ್ದಾರೆ.

ಈ ವಿಷಯ ಕುರಿತಂತೆ ಸುಪ್ರೀಂ ಕೋರ್ಟ್ ನವೆಂಬರ್ 3ರಿಂದ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಅಂದರೆ ನ್ಯಾಯಾಂಗ ಆಯೋಗ ಮಂಡಳಿ ವ್ಯವಸ್ಥೆಯಲ್ಲಿ ಏನೋ ತಪ್ಪಾಗಿತ್ತು ಎಂಬುದನ್ನು ಸೂಚಿಸುತ್ತದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.
ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆ, ನ್ಯಾಯಾಂಗ ಸುಧಾರಣೆಯ ಭಾಗವಾಗಿತ್ತು. ಇದು ಸಂಪೂರ್ಣ ಸಂಸತ್ತು ಮತ್ತು ಪ್ರಮುಖ ನ್ಯಾಯಶಾಸ್ತ್ರಕ್ಕೆ ಬೆಂಬಲವಾಗಿತ್ತು ಎಂದಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ನ್ಯಾಯಾಧೀಶರ ನೇಮಕಾತಿ ಆಯೋಗ ಮಂಡಳಿ ವ್ಯವಸ್ಥೆ ಬದಲಿಗೆ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‍ಜೆಎಸಿ)ವನ್ನು ಅಸ್ತಿತ್ವಕ್ಕೆ ತರಲು ಕಾಯ್ದೆ ತಂದ ಸಂದರ್ಭದಲ್ಲಿ ರವಿಶಂಕರ್ ಪ್ರಸಾದ್ ಅವರು ಕೇಂದ್ರ ಕಾನೂನು ಸಚಿವರಾಗಿದ್ದರು.

ನೂತನ ಕಾನೂನನ್ನು ಸರ್ಕಾರ ತಕ್ಷಣವೇ ಜಾರಿಗೆ ತರಲು ಯತ್ನಿಸಿರಲಿಲ್ಲ. ಸಾಂವಿಧಾನಿಕ ಪರಿಶೀಲನಾ ಆಯೋಗ, ಆಡಳಿತ ಸುಧಾರಣಾ ಆಯೋಗ ಮತ್ತು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಬದಲಾವಣೆ ತರಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT