ಟ್ರಾಯ್(ಸಂಗ್ರಹ ಚಿತ್ರ) 
ದೇಶ

ಕಾಲ್ ಡ್ರಾಪ್‍ ಪರಿಹಾರ ಧನ: ಜ.1 ರಿಂದ ಕಡ್ಡಾಯ ಜಾರಿಗೆ ಟ್ರಾಯ್ ಆದೇಶ

ಸಂಪರ್ಕ ಕಡಿತಗೊಂಡರೆ ರು.1 ಪರಿಹಾರ ಧನ ನೀಡುವುದನ್ನು 2016 ರ ಜನವರಿ 1 ರಿಂದ ಕಡ್ಡಾಯವಾಗಿ ಜಾರಿಗೊಳಿಸಲು (ಟ್ರಾಯ್)ಎಲ್ಲಾ ಟೆಲಿಕಾಂ ಆಪರೇಟರ್ ಗಳಿಗೂ ಆದೇಶ ನೀಡಿದೆ.

ನವದೆಹಲಿ: ಕರೆ ಮಾಡುತ್ತಿರುವಾಗಲೇ ಸಂಪರ್ಕ ಕಡಿತಗೊಂಡರೆ ರು.1 ಪರಿಹಾರ ಧನ ನೀಡುವುದನ್ನು 2016 ರ ಜನವರಿ 1 ರಿಂದ ಕಡ್ಡಾಯವಾಗಿ ಜಾರಿಗೊಳಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ಎಲ್ಲಾ ಟೆಲಿಕಾಂ ಆಪರೇಟರ್ ಗಳಿಗೂ ಆದೇಶ ನೀಡಿದೆ.
ದಿನವೊಂದರಲ್ಲಿ ಮೂರು ಕಾಲ್ ಡ್ರಾಪ್ ಗಳಿಗೆ ಮಾತ್ರ ಪರಿಹಾರ ಸೀಮಿತವಾಗಿರಲಿದೆ ಎಂದು ಟ್ರಾಯ್ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಕಾಲ್ ಡ್ರಾಪ್ ಸಮಸ್ಯೆ ಎದುರಾದ ನಾಲ್ಕು ಗಂಟೆ ಒಳಗಾಗಿ ಟೆಲಿಕಾಂ ಆಪರೇಟಾರ್ ಗಳು ಗ್ರಾಹಕರ ಖಾತೆಗೆ ಪರಿಹಾರ ಮೊತ್ತವನ್ನು ನೀಡಿರುವುದನ್ನು ಎಸ್ಎಂಎಸ್ ಮೂಲಕ ಖಚಿತ ಪಡಿಸಬೇಕು ಎಂದು ಟ್ರಾಯ್ ಪ್ರಕಟಣೆಯಲ್ಲಿ ತಿಳಿಸಿದೆ. 
ಟೆಲಿಕಾಂ ಆಪರೇಟರ್ ಗಳು ಆದೇಶವನ್ನು ಪಾಲಿಸುವ ಬಗ್ಗೆ ಎಚ್ಚರಿಕೆಯಿಂದ ಗಮನಿಸುವುದಾಗಿ ಟ್ರಾಯ್ ತಿಳಿಸಿದೆ. ಅಲ್ಲದೇ ಕಾಲ್ ಡ್ರಾಪ್ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೆಲಿಕಾಂ ಆಪರೇಟರ್ ಗಳು ಕ್ರಮ ಕೈಗೊಳ್ಳಬೇಕೆಂದು ಟ್ರಾಯ್ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT