ಟ್ರಾಯ್(ಸಂಗ್ರಹ ಚಿತ್ರ) 
ದೇಶ

ಕಾಲ್ ಡ್ರಾಪ್‍ ಪರಿಹಾರ ಧನ: ಜ.1 ರಿಂದ ಕಡ್ಡಾಯ ಜಾರಿಗೆ ಟ್ರಾಯ್ ಆದೇಶ

ಸಂಪರ್ಕ ಕಡಿತಗೊಂಡರೆ ರು.1 ಪರಿಹಾರ ಧನ ನೀಡುವುದನ್ನು 2016 ರ ಜನವರಿ 1 ರಿಂದ ಕಡ್ಡಾಯವಾಗಿ ಜಾರಿಗೊಳಿಸಲು (ಟ್ರಾಯ್)ಎಲ್ಲಾ ಟೆಲಿಕಾಂ ಆಪರೇಟರ್ ಗಳಿಗೂ ಆದೇಶ ನೀಡಿದೆ.

ನವದೆಹಲಿ: ಕರೆ ಮಾಡುತ್ತಿರುವಾಗಲೇ ಸಂಪರ್ಕ ಕಡಿತಗೊಂಡರೆ ರು.1 ಪರಿಹಾರ ಧನ ನೀಡುವುದನ್ನು 2016 ರ ಜನವರಿ 1 ರಿಂದ ಕಡ್ಡಾಯವಾಗಿ ಜಾರಿಗೊಳಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ಎಲ್ಲಾ ಟೆಲಿಕಾಂ ಆಪರೇಟರ್ ಗಳಿಗೂ ಆದೇಶ ನೀಡಿದೆ.
ದಿನವೊಂದರಲ್ಲಿ ಮೂರು ಕಾಲ್ ಡ್ರಾಪ್ ಗಳಿಗೆ ಮಾತ್ರ ಪರಿಹಾರ ಸೀಮಿತವಾಗಿರಲಿದೆ ಎಂದು ಟ್ರಾಯ್ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಕಾಲ್ ಡ್ರಾಪ್ ಸಮಸ್ಯೆ ಎದುರಾದ ನಾಲ್ಕು ಗಂಟೆ ಒಳಗಾಗಿ ಟೆಲಿಕಾಂ ಆಪರೇಟಾರ್ ಗಳು ಗ್ರಾಹಕರ ಖಾತೆಗೆ ಪರಿಹಾರ ಮೊತ್ತವನ್ನು ನೀಡಿರುವುದನ್ನು ಎಸ್ಎಂಎಸ್ ಮೂಲಕ ಖಚಿತ ಪಡಿಸಬೇಕು ಎಂದು ಟ್ರಾಯ್ ಪ್ರಕಟಣೆಯಲ್ಲಿ ತಿಳಿಸಿದೆ. 
ಟೆಲಿಕಾಂ ಆಪರೇಟರ್ ಗಳು ಆದೇಶವನ್ನು ಪಾಲಿಸುವ ಬಗ್ಗೆ ಎಚ್ಚರಿಕೆಯಿಂದ ಗಮನಿಸುವುದಾಗಿ ಟ್ರಾಯ್ ತಿಳಿಸಿದೆ. ಅಲ್ಲದೇ ಕಾಲ್ ಡ್ರಾಪ್ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೆಲಿಕಾಂ ಆಪರೇಟರ್ ಗಳು ಕ್ರಮ ಕೈಗೊಳ್ಳಬೇಕೆಂದು ಟ್ರಾಯ್ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT