ಘಟನೆ ವೇಳೆ ಬಸ್ ಗೆ ಬೆಂಕಿ ಹೊತ್ತಿಕೊಂಡಿರುವ ದೃಶ್ಯ 
ದೇಶ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: 15 ಸಾವು, 18 ಗಾಯ

ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಲಾರಿ-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 18 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ಓಂಗೊಲ್: ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಲಾರಿ-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 18 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಪ್ರಕಾಶಂ ಜಿಲ್ಲೆಯ ಕುಂಡುಕೂರು ನಗರದಲ್ಲಿ ಶನಿವಾರ ನಡೆದಿದೆ.

40 ಮಂದಿಯನ್ನು ಹೊತ್ತ ಲಾರಿಯೊಂದು ಮದುವೆ ದಿಬ್ಬಣಕ್ಕೆ ಕುಂದೂಕೂರಿನಿಂದ ಹೈದರಾಬಾದ್ ಗೆ ಸಾಗುತ್ತಿತ್ತು. ಈ ವೇಳೆ ಲಾರಿಗೆ ಎದುರಾದ ಖಾಸಗಿ ಬಸ್ ವೊಂದು ಲಾರಿಗೆ ಮುಖಾಮುಖಿಯಾಗಿದೆ. ಘಟನೆ ವೇಳೆ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗೊಂಡಿದ್ದಾರೆ. ಲಾರಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ವೇಳೆ ಪ್ರಯಾಣಿಕರಾರು ಬಸ್ ನಲ್ಲಿರಲಿಲ್ಲ ಎಂಬುದು ತಿಳಿದುಬಂದಿದ್ದು, ಅಪಘಾತ ನಡೆಯುತ್ತಿದ್ದಂತೆ ಬಸ್ ನಲ್ಲಿದ್ದ ಚಾಲಕ ಹಾಗೂ ಸಹಾಯಕ ಕಾಲ್ಕಿತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT