ಟೆಲಿಕಾಮ್ ಆಪರೇಟರ್(ಸಾಂಕೇತಿಕ ಚಿತ್ರ) 
ದೇಶ

ಕಾಲ್ ಡ್ರಾಪ್ ಪರಿಹಾರ ಕುರಿತ ಟ್ರಾಯ್ ಆದೇಶಕ್ಕೆ ಟೆಲಿಕಾಮ್ ಆಪರೇಟರ್ ಗಳ ಅಸಮಾಧಾನ

ಕಾಲ್ ಡ್ರಾಪ್ ಸಮಸ್ಯೆ ಎದುರಾದರೆ 2016 ರ ಜ.1 ರಿಂದ ಕಡ್ಡಾಯವಾಗಿ ಗ್ರಾಹಕರಿಗೆ 1ರೂಪಾಯಿ ಪರಿಹಾರ ಧನ ನೀಡಬೇಕೆಂಬ ಟ್ರಾಯ್ ಆದೇಶಕ್ಕೆ ಟೆಲಿಕಾಂ ಆಪರೇಟರ್ ಗಳು ಅಸಮಾಧಾನಗೊಂಡಿವೆ.

ನವದೆಹಲಿ: ಕಾಲ್ ಡ್ರಾಪ್ ಸಮಸ್ಯೆ ಎದುರಾದರೆ 2016 ರ ಜ.1 ರಿಂದ ಕಡ್ಡಾಯವಾಗಿ ಗ್ರಾಹಕರಿಗೆ 1ರೂಪಾಯಿ ಪರಿಹಾರ ಧನ ನೀಡಬೇಕೆಂಬ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್)ದ ಆದೇಶಕ್ಕೆ ಟೆಲಿಕಾಂ ಆಪರೇಟರ್ ಗಳು ಅಸಮಾಧಾನಗೊಂಡಿವೆ.
ಕಾಲ್ ಡ್ರಾಪ್ ಸಮಸ್ಯೆ ಎದುರಾಗುವುದಕ್ಕೆ ಕಾರಣವನ್ನು ಟ್ರಾಯ್ ಸರಿಯಾಗಿ ವಿವರಿಸಿಲ್ಲ ಎಂದು ಟೆಲಿಕಾಮ್ ಆಪರೇಟರ್ ಗಳು ಆಕ್ಷೇಪ ವ್ಯಕ್ತಪಡಿಸಿವೆ. ನಿಯಮಗಳ ಪ್ರಕಾರ ಟೆಲಿಕಾಮ್ ಆಪರೇಟರ್ ಗಳು ಜಿಲ್ಲಾ ಕೇಂದ್ರಗಳಲ್ಲಿ ಶೇ.90 ರಷ್ಟು ನೆಟ್ ವರ್ಕ್ ಸೌಲಭ್ಯ ಒದಗಿಸಬೇಕಾಗುತ್ತದೆ. ಆದರೆ ಕಟ್ಟಡಗಳ ಒಳಗೆ ಅತ್ಯುತ್ತಮ ನೆಟ್ವರ್ಕ್ ಸೌಲಭ್ಯ ಕಲ್ಪಿಸುವುದನ್ನು ಖಚಿತ ಪದಿಸಲು ಯಾವುದೇ ನಿಯಮಗಳಿಲ್ಲ ಎಂದು ಟೆಲಿಕಾಮ್ ಆಪರೇಟರ್ ಗಳು ವಾದಿಸಿವೆ.
ನಿಯಮಗಳ ಪ್ರಕಾರ ನೆಟ್ವರ್ಕ್ ಸೌಲಭ್ಯ ಒದಗಿಸಲು ಟೆಲಿಕಾಮ್ ಆಪರೇಟರ್ ಗಳು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಿಒಎಐ ಮುಖ್ಯಸ್ಥ ರಾಜನ್ ಮ್ಯಾಥ್ಯೂಸ್ ಹೇಳಿದ್ದಾರೆ. ಕಾಲ್ ಡ್ರಾಪ್ ನಿಯಮಗಳ ಬಗ್ಗೆ ಟ್ರಾಯ್ ನೊಂದಿಗೆ ಮಾತುಕತೆ ನಡೆಸುವುದು ನಮ್ಮ ಪ್ರಥಮ ಆದ್ಯತೆ, ಟ್ರಾಯ್ ನೊಂದಿಗೆ ನಡೆಸುವ ಚರ್ಚೆ ಫಲಪ್ರದವಾಗದೇ ಇದ್ದರೆ ಟೆಲಿಕಾಮ್ ಆಪರೇಟರ್ ಗಳ ಹಿತಾಸಕ್ತಿಯನ್ನು ಕಾಪಾಡಲು ಕಾನೂನಿನ ಮೊರೆ ಹೋಗುವುದಾಗಿ ರಾಜನ್ ಮ್ಯಾಥ್ಯೂಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT