ಟೆಲಿಕಾಮ್ ಆಪರೇಟರ್(ಸಾಂಕೇತಿಕ ಚಿತ್ರ) 
ದೇಶ

ಕಾಲ್ ಡ್ರಾಪ್ ಪರಿಹಾರ ಕುರಿತ ಟ್ರಾಯ್ ಆದೇಶಕ್ಕೆ ಟೆಲಿಕಾಮ್ ಆಪರೇಟರ್ ಗಳ ಅಸಮಾಧಾನ

ಕಾಲ್ ಡ್ರಾಪ್ ಸಮಸ್ಯೆ ಎದುರಾದರೆ 2016 ರ ಜ.1 ರಿಂದ ಕಡ್ಡಾಯವಾಗಿ ಗ್ರಾಹಕರಿಗೆ 1ರೂಪಾಯಿ ಪರಿಹಾರ ಧನ ನೀಡಬೇಕೆಂಬ ಟ್ರಾಯ್ ಆದೇಶಕ್ಕೆ ಟೆಲಿಕಾಂ ಆಪರೇಟರ್ ಗಳು ಅಸಮಾಧಾನಗೊಂಡಿವೆ.

ನವದೆಹಲಿ: ಕಾಲ್ ಡ್ರಾಪ್ ಸಮಸ್ಯೆ ಎದುರಾದರೆ 2016 ರ ಜ.1 ರಿಂದ ಕಡ್ಡಾಯವಾಗಿ ಗ್ರಾಹಕರಿಗೆ 1ರೂಪಾಯಿ ಪರಿಹಾರ ಧನ ನೀಡಬೇಕೆಂಬ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್)ದ ಆದೇಶಕ್ಕೆ ಟೆಲಿಕಾಂ ಆಪರೇಟರ್ ಗಳು ಅಸಮಾಧಾನಗೊಂಡಿವೆ.
ಕಾಲ್ ಡ್ರಾಪ್ ಸಮಸ್ಯೆ ಎದುರಾಗುವುದಕ್ಕೆ ಕಾರಣವನ್ನು ಟ್ರಾಯ್ ಸರಿಯಾಗಿ ವಿವರಿಸಿಲ್ಲ ಎಂದು ಟೆಲಿಕಾಮ್ ಆಪರೇಟರ್ ಗಳು ಆಕ್ಷೇಪ ವ್ಯಕ್ತಪಡಿಸಿವೆ. ನಿಯಮಗಳ ಪ್ರಕಾರ ಟೆಲಿಕಾಮ್ ಆಪರೇಟರ್ ಗಳು ಜಿಲ್ಲಾ ಕೇಂದ್ರಗಳಲ್ಲಿ ಶೇ.90 ರಷ್ಟು ನೆಟ್ ವರ್ಕ್ ಸೌಲಭ್ಯ ಒದಗಿಸಬೇಕಾಗುತ್ತದೆ. ಆದರೆ ಕಟ್ಟಡಗಳ ಒಳಗೆ ಅತ್ಯುತ್ತಮ ನೆಟ್ವರ್ಕ್ ಸೌಲಭ್ಯ ಕಲ್ಪಿಸುವುದನ್ನು ಖಚಿತ ಪದಿಸಲು ಯಾವುದೇ ನಿಯಮಗಳಿಲ್ಲ ಎಂದು ಟೆಲಿಕಾಮ್ ಆಪರೇಟರ್ ಗಳು ವಾದಿಸಿವೆ.
ನಿಯಮಗಳ ಪ್ರಕಾರ ನೆಟ್ವರ್ಕ್ ಸೌಲಭ್ಯ ಒದಗಿಸಲು ಟೆಲಿಕಾಮ್ ಆಪರೇಟರ್ ಗಳು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಿಒಎಐ ಮುಖ್ಯಸ್ಥ ರಾಜನ್ ಮ್ಯಾಥ್ಯೂಸ್ ಹೇಳಿದ್ದಾರೆ. ಕಾಲ್ ಡ್ರಾಪ್ ನಿಯಮಗಳ ಬಗ್ಗೆ ಟ್ರಾಯ್ ನೊಂದಿಗೆ ಮಾತುಕತೆ ನಡೆಸುವುದು ನಮ್ಮ ಪ್ರಥಮ ಆದ್ಯತೆ, ಟ್ರಾಯ್ ನೊಂದಿಗೆ ನಡೆಸುವ ಚರ್ಚೆ ಫಲಪ್ರದವಾಗದೇ ಇದ್ದರೆ ಟೆಲಿಕಾಮ್ ಆಪರೇಟರ್ ಗಳ ಹಿತಾಸಕ್ತಿಯನ್ನು ಕಾಪಾಡಲು ಕಾನೂನಿನ ಮೊರೆ ಹೋಗುವುದಾಗಿ ರಾಜನ್ ಮ್ಯಾಥ್ಯೂಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT