ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ದಾದ್ರಿ ಘಟನೆ: ಎಲ್ಲರಿಗಿಂತ ಮೋದಿಗೆ ಹೆಚ್ಚು ಹಾನಿ: ಶಿರೋಮಣಿ ಅಕಾಲಿ ದಳ

ಗೋಮಾಂಸ ಸೇವನೆ ಶಂಕಯಿಂದಾಗಿ ದಾದ್ರಿಯಲ್ಲಿ ಮುಸ್ಲಿಂ ವ್ಯಕ್ತಿ ಹತ್ಯೆಯಾದದ್ದು ನಿಜಕ್ಕೂ ಅವಮಾನಕರ ಘಟನೆ. ಇದೊಂದು ಖಂಡನಾರ್ಹ ಘಟನೆಯಾಗಿದೆ. ದಾದ್ರಿಯಲ್ಲಿ ನಡೆದ ಘಟನೆಯ ಬಳಿಕ ನಡೆದ ಎಲ್ಲಾ ಬೆಳವಣಿಗಳು ಎಲ್ಲರಿಗಿಂತಲೂ ಹೆಚ್ಚು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ...

ನವದೆಹಲಿ: ಗೋಮಾಂಸ ಸೇವನೆ ಶಂಕಯಿಂದಾಗಿ ದಾದ್ರಿಯಲ್ಲಿ ಮುಸ್ಲಿಂ ವ್ಯಕ್ತಿ ಹತ್ಯೆಯಾದದ್ದು ನಿಜಕ್ಕೂ ಅವಮಾನಕರ ಘಟನೆ. ಇದೊಂದು ಖಂಡನಾರ್ಹ ಘಟನೆಯಾಗಿದೆ. ದಾದ್ರಿಯಲ್ಲಿ ನಡೆದ ಘಟನೆಯ ಬಳಿಕ ನಡೆದ ಎಲ್ಲಾ ಬೆಳವಣಿಗಳು ಎಲ್ಲರಿಗಿಂತಲೂ ಹೆಚ್ಚು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಹಾನಿಯುಂಟು ಮಾಡಿದೆ ಎಂದು ಎನ್ ಡಿಎಯ ಮೈತ್ರಿ ಪಕ್ಷ ಶಿರೋಮಣಿ ಅಖಾಲಿ ದಳ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಅಖಾಲಿ ದಳದ ಸಂಸದ ನರೇಶ್ ಗುಜರಾಲ್ ಅವರು, ದಾದ್ರಿಯಲ್ಲಿ ನಡೆದ ಘಟನೆ ನಿಜಕ್ಕೂ ಅವಮಾನಕರ ಘಟನೆಯಾಗಿದ್ದು, ಘಟನೆಯಿಂದ ಇಡೀ ದೇಶವೇ ತಲೆತಗ್ಗಿಸುವ ಸಂದರ್ಭ ಎದುರಾಗಿದೆ. ಇದನ್ನು ನಾವು ಖಂಡಿಸುತ್ತೇವೆ. ಉತ್ತರಪ್ರದೇಶದಲ್ಲಿ ನಡೆದ ಈ ಘಟನೆಯು ಎನ್ ಡಿಎ ಸರ್ಕಾರ ಹಾಗೂ ಬಿಜೆಪಿ ಪಕ್ಷದ ವರ್ಚಸ್ಸು ಹಾಳಾಗುವಂತೆ ಮಾಡಿದೆ. ಘಟನೆ ನಂತರದ ಬೆಳೆವಣಿಗೆಗಳು ಇದೀಗ ಇತರರಿಗಿಂತಲೂ ಪ್ರಧಾನಿಯವರಿಗೆ ಹೆಚ್ಚು ಹಾನಿಯುಂಟು ಮಾಡಿದೆ ಎಂದು ಹೇಳಿದ್ದಾರೆ.

ಕೆಲವು ನಾಯಕರು ಉನ್ನತ ಸ್ಥಾನದಲ್ಲಿದ್ದರೂ ಸಹ ಜವಾಬ್ದಾರಿಯನ್ನು ಮರೆತು ಬೇಜಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದೆ. ಇದರಲ್ಲಿ ಸಂಘ ಪರಿವಾರದ ನಾಯಕರು ಹೊರತಾಗಿಲ್ಲ. ವಿಷಾದಕರ ಸಂಗತಿಯೆಂದರೆ ಘಟನೆ ನಡೆದು ಇಷ್ಟು ದಿನ ಕಳೆದರೂ ಈ ವರೆಗೂ ಯಾರೊಬ್ಬರ ಮೇಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಾಗ ಮಾತ್ರ ಧರ್ಮಾಂಧರಿಗೆ ಕಟು ಸಂದೇಶ ರವಾನೆಯಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT