ಸಾಹಿತಿ ವಿಕ್ರಮ ಸೇಥ್ (ಸಂಗ್ರಹ ಚಿತ್ರ) 
ದೇಶ

ಅಕಾಡೆಮಿಯ ಮೌನ ಮುಂದುವರೆದರೆ, ಪ್ರಶಸ್ತಿ ಹಿಂದಿರುಗಿಸುವೆ: ಸೇಥ್

"ಸಾಹಿತ್ಯ ಅಕಾಡೆಮಿಯು ಇನ್ನೂ ಬಾಯಿ ತೆರೆಯದಿದ್ದರೆ, ನಾನೂ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ." ಇದು ಖ್ಯಾತ ಕಾದಂಬರಿಕಾರ ಮತ್ತು ಕವಿ ವಿಕ್ರಂ ಸೇಥ್ ಅವರ ನಿಷ್ಠುರ ನುಡಿ...

ನವದೆಹಲಿ: ಸಾಹಿತ್ಯ ಅಕಾಡೆಮಿಯು ಇನ್ನೂ ಬಾಯಿ ತೆರೆಯದಿದ್ದರೆ, ನಾನೂ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ." ಇದು ಖ್ಯಾತ ಕಾದಂಬರಿಕಾರ ಮತ್ತು ಕವಿ ವಿಕ್ರಂ ಸೇಥ್ ಅವರ ನಿಷ್ಠುರ  ನುಡಿ.

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹಾಗೂ ಲೇಖಕರು, ಚಿಂತಕರ ರಕ್ಷಣೆ ಬಗ್ಗೆ ಅಕಾಡೆಮಿ ಬಾಯಿ ಮುಚ್ಚಿ ಕುಳಿತುಕೊಳ್ಳುವುದನ್ನು ಮುಂದುವರಿಸಿದರೆ, ಪ್ರಶಸ್ತಿ ವಾಪಸ್ ನಿರ್ಧಾರ ಕೈಗೊಳ್ಳುತ್ತೇನೆ  ಎಂದಿದ್ದಾರೆ ಸೇಥ್. ಈ ಮೂಲಕ ಭಾರತದಾದ್ಯಂತ ನಡೆಯುತ್ತಿರುವ ಸಾಹಿತಿಗಳ ಸೆಡವಿಗೆ ಮತ್ತೊಬ್ಬ ಹೈಪ್ರೊ-ಲ್ ಲೇಖಕ ಸೇರ್ಪಡೆ ಗೊಳ್ಳುವ ಸುಳಿವು ಸಿಕ್ಕಿದೆ. ಎನ್‌ಡಿ ಟಿವಿಗೆ ನೀಡಿದ  ಸಂದರ್ಶನದಲ್ಲಿ ಮಾತನಾಡಿರುವ ಸೇಥ್, “ನನಗೆ ಪ್ರಶಸ್ತಿಯ ಬಗ್ಗೆ ಆಸೆಯೇನೂ ಇಲ್ಲ. ಆದರೆ, ಸಾಹಿತ್ಯ ಅಕಾಡೆಮಿಯ ಮೌನ ಮಾತ್ರ ಅಚ್ಚರಿಯದ್ದು. ಯಾರ್ಯಾರು ಪ್ರಶಸ್ತಿಗಳನ್ನು  ಹಿಂದಿರುಗಿಸಿದ್ದಾರೋ, ಅವರನ್ನೆಲ್ಲ ನಾನು ಶ್ಲಾಘಿಸುತ್ತೇನೆ. ಇಂತಹ ನಿರ್ಧಾರ ಕೈಗೊಳ್ಳಲು ಧೈರ್ಯ ಬೇಕು" ಎಂದರು.

ಇದೇ ವೇಳೆ, “ನೀವೂ ಪ್ರಶಸ್ತಿ ಹಿಂದಿರುಗಿಸುತ್ತೀರಾ" ಎಂದು ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲೇಖಕ ಸೇಥ್, “ಅಕಾಡೆಮಿಯ ಮುಂದಿನ ಸಭೆಯಲ್ಲಿ ಏನೇನು ನಡೆಯುತ್ತದೆ ಎಂಬುದನ್ನು ನೋಡುತ್ತೇನೆ. ಅಕಾಡೆಮಿಯು ತನ್ನ ಮೌನ ವನ್ನು ಮುಂದುವರಿಸಿದರೆ, ನಾನೂ ಪ್ರಶಸ್ತಿ ವಾಪಸ್ ನೀಡುತ್ತೇನೆ" ಎಂದು ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT