ಅರುಣ್ ಜೇಟ್ಲಿ 
ದೇಶ

ಎನ್‌ಜೆಎಸಿ ಕುರಿತ ಸುಪ್ರೀಂಕೋರ್ಟ್ ತೀರ್ಪು ದೋಶಪೂರಿತ ತರ್ಕ: ಅರುಣ್ ಜೇಟ್ಲಿ

ರಾಷ್ಟ್ರೀಯ ನ್ಯಾಯಾಂಗ ನೇಮಕ ಆಯೋಗ(ಎನ್‌ಜೆಎಸಿ) ಅಸಂವಿಧಾನಿಕವೆಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪು ದೋಷಪೂರಿತ ತರ್ಕ ಎಂದ

ನವದೆಹಲಿ: ರಾಷ್ಟ್ರೀಯ ನ್ಯಾಯಾಂಗ ನೇಮಕ ಆಯೋಗ(ಎನ್‌ಜೆಎಸಿ) ಅಸಂವಿಧಾನಿಕವೆಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪು ದೋಷಪೂರಿತ ತರ್ಕ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಫೇಸ್ ಬುಕ್ ನ ಫೇಜ್ ನಲ್ಲಿ ತೀರ್ಪಿನ ಬಗ್ಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿರುವ ಜೇಟ್ಲಿ, ಚುನಾಯಿತ ಜನಪ್ರತಿನಿಧಿಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡದಿದ್ದರೆ ಅದು ಪ್ರಜಾಪ್ರಭುತ್ವಕ್ಕೆ ಅಪಾಯ. ಭಾರತದ ಪ್ರಜಾತಂತ್ರವು ಜನರಿಂದ ನೇರವಾಗಿ ಚುನಾಯಿತರಲ್ಲದವರ ನಿರಂಕುಶ ಪ್ರಭುತ್ವವಾಗಲು ಸಾಧ್ಯವಿಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕಡೆಗಣಿಸಿದರೆ ಅದು ಪ್ರಜಾಪ್ರಭುತ್ವದ ಅಸ್ಥಿತ್ವಕ್ಕೆ ಅಪಾಯ ಎಂದು ಬರೆದುಕೊಂಡಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಮುಕ್ತ ನ್ಯಾಯಾಂಗದ ಮೂಲ ರಚನೆಯನ್ನು ಎತ್ತಿ ಹಿಡಿದಿದೆ ನಿಜ. ಆದರೆ ಸಂವಿಧಾನದ ಇತರ ಐದು ಮೂಲಾಂಶಗಳೆನಿಸಿದ ಸಂಸದೀಯ ಪ್ರಜಾತಂತ್ರ, ಚುನಾಯಿತ ಪ್ರಭುತ್ವ, ಸಚಿನ ಸಂಪುಟ, ಪ್ರಧಾನಿ ಮತ್ತು ಪ್ರತಿಪಕ್ಷ ನಾಯಕರ ಪಾತ್ರವನ್ನು ಇಲ್ಲಿ ದುರ್ಬಲಗೊಳಿಸಲಾಗಿದೆ. ಇದು ಮೂಲಭೂತ ದೋಷವಾಗಿದ್ದು, ಬಹುತೇಕ ಮಂದಿ ಇಲ್ಲಿಯೇ ಎಡವಿದ್ದಾರೆ ಎಂದು ಜೇಟ್ಲಿ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT