ಮೊಹಮ್ಮದ್ ಅಖ್ಲಾಕ್ ನ ಸಾವಿನ ದುಃಖದಲ್ಲಿರುವ ಕುಟುಂಬಸ್ಥರು 
ದೇಶ

ದಾದ್ರಿ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ಲಖನೌ: ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.

ದಾದ್ರಿ ಪ್ರಕರಣ ಇಡೀ ದೇಶದಾದ್ಯಂತ ಸಾಕಷ್ಟು ವಿವಾದಗಳನ್ನೇ ಸೃಷ್ಟಿಸಿತ್ತು, ಘಟನೆ ಕುರಿತಂತೆ ಆರೋಪಿಗಳ ಬಂಧನಕ್ಕಾಗಿ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದರಂತೆ ಈ ವರೆಗೂ 9 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಬಂಧನಕ್ಕೊಳಗಾಗಿರುವುದು 10ನೇ ಆರೋಪಿ ಹರಿ ಓಂ ಎಂದು ಹೇಳಲಾಗುತ್ತಿದ್ದು, ಈತ ಘಟನೆ ನಂತರ ಸಂಬಂಧಿಕರೊಬ್ಬನ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಅಧಿಕಾರಿ ಅನುರಾಗ್ ಸಿಂಗ್ ಅವರು, ಬಂಧಿತ ಹರಿ ಓಂ ಪ್ರಕರಣದ 10ನೇ ಆರೋಪಿಯಾಗಿದ್ದಾನೆ. ತನಿಖೆ ವೇಳೆ ಆರೋಪಿ ಹರಿ ಓಂ ಮೊಬೈಲ್ ಸಂಖ್ಯೆ ದೊರೆತಿತ್ತು. ಹೀಗಾಗಿ ಮೊಬೈಲ್ ನಂಬರ್ ನ್ನು ಟ್ರೇಸ್ ಮಾಡುವ ಮೂಲಕ ಆತನಿರುವ ಸ್ಥಳದ ಬಗ್ಗೆ ಮಾಹಿತಿ ಸಿಕ್ಕಿತು. ಈ ಮಾಹಿತಿ ಅನ್ವಯ ಹರಿ ಓಂನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ದಾದ್ರಿ ಬಳಿಯ ಬಿಶಾಡಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಅಖ್ಲಾಕ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧನಕ್ಕೊಳಪಡಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT