ಉರ್ದು ಸಾಹಿತಿ ಮುನಾವರ್ ರಾಣಾ (ಸಂಗ್ರಹ ಚಿತ್ರ) 
ದೇಶ

ಮೂವರು ಸಾಹಿತಿಗಳಿಂದ ಪ್ರಶಸ್ತಿ ವಾಪಸ್

ಹಿರಿಯ ವಿಮರ್ಶಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ದಾದ್ರಿ ಘಟನೆ ಖಂಡಿಸಿ ಭಾನುವಾರ ರಾಷ್ಟ್ರಮಟ್ಟದಲ್ಲಿ ಇನ್ನೂ ಇಬ್ಬರು ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ...

ವಾರಂಗಲ್: ಹಿರಿಯ ವಿಮರ್ಶಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ದಾದ್ರಿ ಘಟನೆ ಖಂಡಿಸಿ ಭಾನುವಾರ ರಾಷ್ಟ್ರಮಟ್ಟದಲ್ಲಿ ಇನ್ನೂ ಇಬ್ಬರು ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ.

ಖ್ಯಾತ ಉರ್ದು ಲೇಖಕ ಮುನಾವರ್ ರಾಣಾ ಸುದ್ದಿವಾಹಿನಿಯ ಚರ್ಚೆಯಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಶಸ್ತಿ ಹಿಂತಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಜತೆಗೆ ಇನ್ನು ಮುಂದೆಯೂ ಯಾವುದೇ  ಸರ್ಕಾರಿ ಪ್ರಶಸ್ತಿ, ಗೌರವ ಸ್ವೀಕರಿಸುವುದಿಲ್ಲ ಎಂದು ಘೋಷಿಸಿ ಕೊಂಡಿದ್ದಾರೆ. ೨೦೧೪ರಲ್ಲಿ ರಾಣಾಗೆ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಮತ್ತೊಂದೆಡೆ, ತೆಲುಗು ಲೇಖಕಿ  ಕಾತ್ಯಾಯಿನಿ ವಿದ್ಮಾಹೆ ಕೂಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂತಿರುಗಿಸಲು ನಿರ್ಧರಿಸಿದ್ದಾರೆ.

ಅವರು ಕಾಕತೀಯ ವಿವಿಯಲ್ಲಿ ತೆಲುಗು ಪ್ರೊಫೆಸರ್ ಆಗಿದ್ದಾರೆ. ಇದೇ ವೇಳೆ, ವಾರಾಣ ಸಿಯ ಹಿಂದಿ ಲೇಖಕ ಕಾಶಿನಾಥ್ ಸಿಂಗ್ ಅವರೂ ಪ್ರಶಸ್ತಿ ವಾಪಸ್ ನಿರ್ಧಾರ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT