ಜಗಜಿತ್ ಸಿಂಗ್ 
ದೇಶ

ಗಾಯಕ ಜಗಜಿತ್ ಸಿಂಗ್ ಮೇಲೆ ಪಾಕಿಸ್ತಾನ ನಡೆಸಿತ್ತ ಬೇಹುಗಾರಿಕೆ!

ಗಜಲ್ ಮಾಂತ್ರಿಕ ಜಗಜಿತ್ ಸಿಂಗ್ ಅವರ ಜೀವನಾಧಾರಿತ ಪುಸ್ತಕವೊಂದು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು ಅದರಲ್ಲಿ ಪಾಕಿಸ್ತಾನ ಜಗಜಿತ್ ಸಿಂಗ್ ಮೇಲೆ...

ನವದೆಹಲಿ: ಗಜಲ್ ಮಾಂತ್ರಿಕ ಜಗಜಿತ್ ಸಿಂಗ್ ಅವರ ಜೀವನಾಧಾರಿತ ಪುಸ್ತಕವೊಂದು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು ಅದರಲ್ಲಿ ಪಾಕಿಸ್ತಾನ ಗುಪ್ತಚರ ಇಲಾಖೆ ಜಗಜಿತ್ ಸಿಂಗ್ ಮೇಲೆ ಬೇಹುಗಾರಿಕೆ ನಡೆಸಿದೆ ಎಂಬ ಅಂಶ ಉಲ್ಲೇಖವಾಗಿದೆ.

ಸತ್ಯಾ ಶರಣ್ ಅವರು ಬರೆದಿರುವ ಬಾತ್ ನಿಕ್‌ಲೇಗಿ ತೊ ಫಿರ್- ದಿ ಲೈಫ್ ಆಂಡ್ ಮ್ಯೂಸಿಕ್ ಆಫ್ ಜಗಜಿತ್ ಸಿಂಗ್ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ. 1979ರಲ್ಲಿ ಜಗಜಿತ್ ಸಿಂಗ್ ಪಾಕಿಸ್ತಾನದಲ್ಲಿ ತಮ್ಮ ಮೊದಲ ಕಛೇರಿ ನೀಡಿದ್ದರು. ಆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಶ್ರೋತೃಗಳು ಸೇರುತ್ತಿದ್ದುದರಿಂದ, ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಅವರನ್ನು ಹಿಂಬಾಲಿಸಲು ಅಧಿಕಾರಿಯನ್ನು ನಿಯೋಜಿಸಿತ್ತು. ಆದರೆ, ಜಗಜಿತ್ ಗಾಯನ ಕೇಳಿದ ನಂತರ ಈ ಅಧಿಕಾರಿ ಅವರ ಅಭಿಮಾನಿಯಾಗಿ ಬದಲಾದ ಎಂದು ಹಾರ್ಪರ್‌ಕೊಲಿನ್ಸ್ ಪ್ರಕಾಶನ ಪ್ರಕಟಿಸಿದ ಪುಸ್ತಕದಲ್ಲಿ ಉಲ್ಲೇಖವಾಗಿದೆ.

ಒಬ್ಬ ವ್ಯಕ್ತಿ ನಮ್ಮನ್ನು ಏರ್‌ಪೋರ್ಟ್‌ನಲ್ಲಿ, ನಂತರ ಹೋಟೆಲ್‌ನಲ್ಲೂ ಹಿಂಬಾಲಿಸಿ ಬಂದ. ರೂಮಿನ ಬಾಗಿಲು ತಟ್ಟಿ ಒಳನುಸುಳಿದ. ತಾನು ಬೇಹುಗಾರ ಎಂದು ತಿಳಿಸಿ, ರೂಮಿನಲ್ಲಿ ನಡೆಯುವ ಮಾತುಕತೆ ಕದ್ದಾಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಎಚ್ಚರಿಸಿ, ಗುಟ್ಟಾಗಿ ಮದ್ಯದ ಬಾಟಲೊಂದನ್ನು ಉಡುಗೊರೆಯಾಗಿ ನೀಡಿದ’ ಎಂದು ಜಗಜಿತ್ ಪತ್ನಿ ಚಿತ್ರಾ ಹೇಳಿದ್ದಾಗಿ ಸತ್ಯಾ ಶರಣ್ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT