ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ವಿಧ್ವಂಸಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ: ಅರುಣ್ ಜೇಟ್ಲಿ

ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.

ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ, ಸುಧೀಂದ್ರ ಕುಲಕರ್ಣಿ, ಸಾಹಿತಿಗಳ ಹತ್ಯೆ ಖಂಡಿಸಿ ಪ್ರಶಸ್ತಿ ಮರಳಿಸುವಕೆಯಂತಹ ಪ್ರಕರಣಗಳು ದೇಶದೆಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಪ್ರಕರಣ ಸಂಬಂಧ ಈ ವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಮೌನ ತಾಳಿದ್ದ ಅರುಣ್ ಜೇಟ್ಲಿ ಅವರು ಇದೀಗ ತಮ್ಮ ಮೌನವನ್ನು ಮುರಿದಿದ್ದು, ಶಾಂತ ಕದಡುವ ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳು ನಿಜಕ್ಕೂ ಗಂಭೀರ ವಿಷಯಗಳಾಗಿದ್ದು, ಈ ಘಟನೆಗಳು ಅಂತರ್ ಸಮುದಾಯಗಳ ನಡುವಿನ ಸಂಬಂಧಗಳನ್ನು ಹಾಳು ಮಾಡುತ್ತದೆ. ಇನ್ನು ಕೆಲವು ಘಟನೆಗಳು ಸೂಕ್ಷ್ಮ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಘಟನೆಯನ್ನು ಹಿಡಿದು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನೆಗುವ ಬದಲು ವಿಷಯವನ್ನಿಡಿದು ಚರ್ಚೆಯನ್ನು ನಡೆಸಿ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣ ಸಂಬಂಧ ಪ್ರಧಾನಮಂತ್ರಿ ಸಹ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ, ನಾಯಕರೂ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT