ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ವಿಧ್ವಂಸಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ: ಅರುಣ್ ಜೇಟ್ಲಿ

ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.

ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ, ಸುಧೀಂದ್ರ ಕುಲಕರ್ಣಿ, ಸಾಹಿತಿಗಳ ಹತ್ಯೆ ಖಂಡಿಸಿ ಪ್ರಶಸ್ತಿ ಮರಳಿಸುವಕೆಯಂತಹ ಪ್ರಕರಣಗಳು ದೇಶದೆಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಪ್ರಕರಣ ಸಂಬಂಧ ಈ ವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಮೌನ ತಾಳಿದ್ದ ಅರುಣ್ ಜೇಟ್ಲಿ ಅವರು ಇದೀಗ ತಮ್ಮ ಮೌನವನ್ನು ಮುರಿದಿದ್ದು, ಶಾಂತ ಕದಡುವ ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳು ನಿಜಕ್ಕೂ ಗಂಭೀರ ವಿಷಯಗಳಾಗಿದ್ದು, ಈ ಘಟನೆಗಳು ಅಂತರ್ ಸಮುದಾಯಗಳ ನಡುವಿನ ಸಂಬಂಧಗಳನ್ನು ಹಾಳು ಮಾಡುತ್ತದೆ. ಇನ್ನು ಕೆಲವು ಘಟನೆಗಳು ಸೂಕ್ಷ್ಮ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಘಟನೆಯನ್ನು ಹಿಡಿದು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನೆಗುವ ಬದಲು ವಿಷಯವನ್ನಿಡಿದು ಚರ್ಚೆಯನ್ನು ನಡೆಸಿ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣ ಸಂಬಂಧ ಪ್ರಧಾನಮಂತ್ರಿ ಸಹ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ, ನಾಯಕರೂ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT