ಸಾಂದರ್ಭಿಕ ಚಿತ್ರ 
ದೇಶ

ಬೇಳೆ ಅಕ್ರಮ ದಾಸ್ತಾನು; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಕೇಂದ್ರ ತಂಡ ದಾಳಿ

ತೊಗರಿಬೇಳೆಯನ್ನು ಕೆಲವು ಅಂಗಡಿ, ಗೋದಾಮುಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಬೆಲೆ...

ನವದೆಹಲಿ: ತೊಗರಿಬೇಳೆಯನ್ನು ಕೆಲವು ಅಂಗಡಿ, ಗೋದಾಮುಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳಲ್ಲಿ ಕೇಂದ್ರದ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 5 ಸಾವಿರದ 800 ಟನ್ ಗಳಷ್ಟು ಬೇಳೆಯನ್ನು ವಶಪಡಿಸಿಕೊಂಡಿದೆ.

ದಾಸ್ತಾನುಗಾರರು ತೊಗರಿ ಬೇಳೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟ ಪರಿಣಾಮ ಬೆಲೆ ಏರಿಕೆಗೆ ಕಾರಣವಾಗಿತ್ತು. ಇದರಿಂದಾಗಿ ತೊಗರಿಬೇಳೆ ಕೇಜಿಗೆ 200 ರೂಪಾಯಿ ತಲುಪಿತ್ತು.

ಈ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ತಂಡ ಬೇಳೆಕಾಳು ದಾಸ್ತಾನುಗಾರರ ಅಂಗಡಿ ಗೋದಾಮುಗಳ ಮೇಲೆ  ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸುಮಾರು 9 ಸಾವಿರ ಕ್ವಿಂಟಾಲ್ ಬೇಳೆ ಜಪ್ತಿ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ತೊಗರಿಬೆಳೆ ಬೆಲೆ ಏರಿಕೆ ಸಂಬಂಧ ಇಂದು ಗ್ರಾಹಕ ಪೂರೈಕೆ, ಕೃಷಿ, ವಾಣಿಜ್ಯ ಮತ್ತು ಇತರ ಸಚಿವಾಲಯಗಳ ಕಾರ್ಯದರ್ಶಿಗಳ ಮಟ್ಟದ ಸಭೆ ದೆಹಲಿಯಲ್ಲಿಂದು ನಡೆಯಿತು.
ಬೇಳೆಗಳ ಬೆಲೆ ಏರಿಕೆ ಸಂಬಂಧ ರಾಜ್ಯ ಸರ್ಕಾರಗಳು ಏನು ಕ್ರಮ ಕೈಗೊಂಡಿವೆ ಎಂದು ಸಭೆಯಲ್ಲಿ ಪರಿಶೀಲಿಸಲಾಯಿತು. ಅಗತ್ಯ ವಸ್ತುಗಳ ಕಾಯ್ದೆಯನ್ನು ತಕ್ಷಣವೇ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಯಿತು. ಕೆಲವು ರಾಜ್ಯಗಳಲ್ಲಿ ಏಕಕಾಲಕ್ಕೆ ತಕ್ಷಣ ದಾಳಿ ನಡೆಸಲಾಯಿತು. ಇನ್ನೂ ಕೂಡ ಈ ದಾಳಿ ಮುಂದುವರಿಯಲಿದೆ.

ತೆಲಂಗಾಣದಲ್ಲಿ 2 ಸಾವಿರದ 549 ಟನ್, ಮಧ್ಯ ಪ್ರದೇಶದಲ್ಲಿ 2 ಸಾವಿರದ 295 ಟನ್, ಆಂಧ್ರ ಪ್ರದೇಶದಲ್ಲಿ 600 ಟನ್, ಕರ್ನಾಟಕದಲ್ಲಿ 360 ಟನ್ ಹಾಗೂ ಮಹಾರಾಷ್ಟ್ರದಲ್ಲಿ 10 ಕ್ವಿಂಟಾಲ್ ಗಳಷ್ಟು ಬೇಳೆಗಳನ್ನು ವಶಪಡಿಸಿಕೊಳ್ಳಲಾಯಿತು. ಕರ್ನಾಟಕದ ಮೈಸೂರು, ಗುಲ್ಬರ್ಗಾ ಮೊದಲಾದೆಡೆ ದಾಳಿ ಮುಂದುವರಿದಿದೆ ಎಂದು ಕೇಂದ್ರ ಗ್ರಾಹಕ ಪೂರೈಕೆ ಕಾರ್ಯದರ್ಶಿ ಸಿ.ವಿಶ್ವನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT