ದುಖತಪ್ತ ಮೊಹಮ್ಮದ್ ಇಕ್ಲಾಕ್ ಕುಟುಂಬಸ್ಥರು 
ದೇಶ

ದಾದ್ರಿ ಘಟನೆ ಪೂರ್ವ ಯೋಜಿತ: ಅಲ್ಪ ಸಂಖ್ಯಾತ ಆಯೋಗ

ಉತ್ತರ ಪ್ರದೇಶದ ದಾದ್ರಿಯಲ್ಲಿ ಮೊಹಮ್ಮದ್ ಇಕ್ಲಾಕ್ ಎಂಬ ಮುಸಲ್ಮಾನ ವ್ಯಕ್ತಿಯನ್ನು ಗೋ ಮಾಂಸ ಸೇವಿಸಿದ...

ನವದೆಹಲಿ: ಉತ್ತರ ಪ್ರದೇಶದ ದಾದ್ರಿಯಲ್ಲಿ ಮೊಹಮ್ಮದ್ ಇಕ್ಲಾಕ್ ಎಂಬ ಮುಸಲ್ಮಾನ ವ್ಯಕ್ತಿಯನ್ನು ಗೋ ಮಾಂಸ ಸೇವಿಸಿದ ಆರೋಪದ ಮೇಲೆ ಕೊಂದು ಹಾಕಿರುವ ಘಟನೆ ಪೂರ್ವಾಲೋಚನೆ ಕೃತ್ಯವೇ ಹೊರತು ಸಹಜವಲ್ಲ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ತನ್ನ ವರದಿಯಲ್ಲಿ ಹೇಳಿದೆ.

ಆಯೋಗದ ಅಧ್ಯಕ್ಷ ನಸೀಮ್ ಅಹ್ಮದ್ ಮತ್ತು ಮೂವರು ಸದಸ್ಯರನ್ನೊಳಗೊಂಡ ಅವರ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ತಯಾರಿಸಿದೆ. ಇದೊಂದು ಪೂರ್ವ ಯೋಜಿತ ಸಂಚು. ಇಲ್ಲಿ ದೇವಸ್ಥಾನವನ್ನು ಅವರ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ. ಪ್ರಮುಖ ಗುಂಪಿನ ಜನರು ಮುಗ್ಧ ಕುಟುಂಬವೊಂದನ್ನು ಬಲಿ ಪಡೆದುಕೊಂಡಿದೆ.

ಆದರೆ ಈ ಘಟನೆ ಬಗ್ಗೆ ರಾಜಕೀಯ ವ್ಯಕ್ತಿಗಳು ರೊಚ್ಚಿಗೆಬ್ಬಿಸುವ ಹೇಳಿಕೆ ನೀಡುವುದು ಸರಿಯಲ್ಲ. ಇದರಿಂದ ಸಮಾಜದಲ್ಲಿ ಎರಡು ಧರ್ಮಗಳ ನಡುವೆ ಬಿರುಕು ಹೆಚ್ಚಾಗುತ್ತದೆ ಎಂದು ನಸೀಮ್ ಅಹ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT