ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮುಖಂಡ ರಾಮ್ ದಾಸ್ ಅಠಾವಳೆ 
ದೇಶ

ಆತ್ಮರಕ್ಷಣೆಗಾಗಿ ದಲಿತರಿಗೆ ಬಂದೂಕು ನೀಡಬೇಕು: ಆರ್ ಪಿ ಐ ಮುಖಂಡ

ದಲಿತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ದಲಿತರಿಗೆ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ನೀಡಬೇಕೆಂದು ಹೇಳಿದ್ದಾರೆ.

ಮುಂಬೈ: ದಲಿತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ದಲಿತರಿಗೆ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ನೀಡಬೇಕೆಂದು ಹೇಳಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಸರ್ಕಾರ ದಲಿತರ ಮೇಲೆ ನಡೆಯುತ್ತಿರುವ ದಾಳಿಗಳನ್ನು ತಡೆಯಲು ವಿಫಲವಾಗಿವೆ. ದಲಿತರನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದಾದಲ್ಲಿ ದಲಿತರಿಗೆ ಪರವಾನಗಿ ಇರುವ ಬಂದೂಕುಗಳನ್ನು ನೀಡಬೇಕು ಎಂದು ಆರ್.ಪಿ.ಐ ಅಧ್ಯಕ್ಷ ರಾಮ್ ದಾಸ್ ಅಠಾವಳೆ ಒತ್ತಾಯಿಸಿದ್ದಾರೆ.
ಯುಪಿಎ ಸರ್ಕಾರ ಇದ್ದಾಗಲೂ ದಲಿತರ ಮೇಲೆ ದಾಳಿಗಳು ನಡೆದಿತ್ತು. ಎನ್.ಡಿ.ಎ ಸರ್ಕಾರ ಬಂದ ಮೇಲೂ ದಾಳಿ ಮುಂದುವರೆದಿದೆ. ಅದ್ದರಿಂದ ದಲಿತರಿಗೆ ಆತ್ಮ ರಕ್ಷಣೆ ಮಾಡಿಕೊಳ್ಳುವುದನ್ನು ಬೇರೆ ಮಾರ್ಗವಿಲ್ಲ ಎಂದಿದ್ದಾರೆ. ಇದೇ ವೇಳೆ ದಲಿತರ ಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿ.ಕೆ ಸಿಂಗ್ ಅವರ ಹೇಳಿಕೆ ಬಗ್ಗೆ ಆಕ್ರೋಶಗೊಂಡಿದ್ದು, ಮಾಜಿ ಸೇನಾ ಮುಖ್ಯಸ್ಥರಾಗಿದ್ದ ವಿ.ಕೆ ಸಿಂಗ್, ದಲಿತರನ್ನು ನಾಯಿಗೆ ಹೋಲಿಕೆ ಮಾಡಬಾರದು ಈ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT