ಮನೋಹರ್ ಲಾಲ್ ಕಟ್ಟರ್ 
ದೇಶ

ದಲಿತ ಬಾಲಕನದ್ದು ಆತ್ಮಹತ್ಯೆ: ಹರ್ಯಾಣ ಸಿಎಂ ಕಟ್ಟರ್

ಹರ್ಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದಲಿತ ಬಾಲಕ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಹರ್ಯಾಣ: ಹರ್ಯಾಣದ ಫರಿದಾಬಾದ್ ನ ಹಳ್ಳಿಯೊಂದರಲ್ಲಿ ನಡೆದಿರುವ ದಲಿತ ಬಾಲಕನ ನಿಗೂಢ ಸಾವಿನ ಬಗ್ಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದಲಿತ ಬಾಲಕ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಹಣಕಾಸಿನ ವಿಚಾರ ಹಾಗೂ ಪಾರಿವಾಳ ಕಳ್ಳತನಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವಿನ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪ್ರಕರಣವನ್ನು ಇತ್ಯರ್ಥಗೊಳಿಸಿದ ಬಳಿಕ ಎರಡೂ ಕುಟುಂಬದವರು ವಾಪಸ್ ತೆರಳಿದ್ದರು. ಇತ್ಯರ್ಥಗೊಳಿಸಬೇಕಾದರೆ ಬಾಲಕನನ್ನು ವಿಚಾರಣೆಗೊಳಪಡಿಸಿರಲಿಲ್ಲ  ಎಂದಿದ್ದು ಮೃತ ದಲಿತ ಬಾಲಕನ ಕುಟುಂಬಕ್ಕೆ ಉದ್ಯೋಗ ನೀಡುವುದಾಗಿ ಕಟ್ಟರ್ ತಿಳಿಸಿದ್ದಾರೆ.
ಶವಪರೀಕ್ಷೆ ನಡೆಸಿರುವ ವೈದ್ಯರು ನೇಣುಬಿಗಿದಿರುವುದರಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ವರದಿ ನೀಡಿದ್ದು, ದೇಹದ ಮೇಲೆ ಗಾಯದ ಗುರುತುಗಳಿಲ್ಲ ಎಂದು ಹೇಳಿದ್ದಾರೆ.
ಪಾರಿವಾಳ ಕದ್ದ ಆರೋಪದಲ್ಲಿ ಬಾಲಕನನ್ನು ಪೊಲೀಸರು ಬಂಧಿಸಲಾಗಿತ್ತು. ಅಲ್ಲದೆ, ಆತನಿಗೆ ಚೆನ್ನಾಗಿ ಹೊಡಿದಿದ್ದರು ಎಂದು ಮನೆಯವರು ಆರೋಪ ಮಾಡಿದ್ದಾರೆ. ಅದೂ ಅಲ್ಲದೆ, ಬಾಲಕನನ್ನು ಬಿಡುಗಡೆ ಮಾಡಬೇಕೆಂದರೆ ಪೊಲೀಸರು 10 ಸಾವಿರ ರೂಪಾಯಿ ಕೇಳಿದ್ದರು. ಬಳಿಕ ಈ ಮೊತ್ತ 15 ಸಾವಿರಕ್ಕೆ ಏರಿದ್ದರು. ತೀರ ಬಡವರಾಗಿದ್ದ ದಲಿತ ಕುಟುಂಬದವರು ದುಡ್ಡು ಹೊಂದಿಸಿ ತರುವಷ್ಟರಲ್ಲಿ ಬಾಲಕನ ತಾಯಿಗೆ ನಿಮ್ಮ ಮಗ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದರು. ಆದರೆ, ಬೆಳಗ್ಗೆ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT