ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ 
ದೇಶ

ಪ್ರಧಾನಿ ಮೋದಿಗೆ ರಾಮ ದೇವರ ಆಶೀರ್ವಾದವಿದೆ: ಉಮಾ ಭಾರತಿ

ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಮ ದೇವರ ಆಶೀರ್ವಾದವಿದೆ. ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ...

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಮ ದೇವರ ಆಶೀರ್ವಾದವಿದೆ. ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಅವರು ಯಶಸ್ವಿಯಾಗುತ್ತಾರೆ. ಹೀಗೆ ಹೇಳಿದ್ದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ. ಈಗ ಜನ ಸಾಮಾನ್ಯರ ಬಾಯಲ್ಲಿ ಬೇಳೆ ಕಾಳುಗಳಿಗೆ ಬೆಲೆ ಹೆಚ್ಚಾದುದರ ಬಗ್ಗೆಯೇ ಮಾತು. ದಸರಾ ಹಬ್ಬದ ಸಮಯ ಬೇರೆ. ಅಗತ್ಯ ಆಹಾರ ಪದಾರ್ಥಗಳಿಗೆ ಬೆಲೆ ಏರಿಕೆಯಾದರೆ ಏನು ತಿನ್ನುವುದು ಅಂತ.ಈ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉಮಾ ಭಾರತಿಯವರು ಈ ಮೇಲಿನಂತೆ ಉತ್ತರ ನೀಡಿದರು.

ಅಗತ್ಯ ವಸ್ತುಗಳ ಬೆಲೆ ಏರಿದ್ದು ನಿಜ. ಆದರೆ ಅದು ನಿಯಂತ್ರಣಕ್ಕೆ ಬರಲಿದೆ. ಪ್ರಧಾನಿ ಮೋದಿಯವರು ಶೀಘ್ರದಲ್ಲಿಯೇ ಹೆಚ್ಚಿರುವ ಬೆಲೆಯನ್ನು ನಿಯಂತ್ರಣಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವರು ನಿನ್ನೆ ರಾತ್ರಿ ತಮ್ಮ ಸ್ವ ಕ್ಷೇತ್ರ ಝಾನ್ಸಿಯಲ್ಲಿ ದಸರಾ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಝಾನ್ಸಿಯ ಜಿಮ್ಕಾನಾ ಮೈದಾನದಲ್ಲಿ ಸರ್ದಾರ್ ಬಜಾರ್ ನಲ್ಲಿ ದಸರಾ ಹಬ್ಬದ ಪ್ರಯುಕ್ತ ಕಾರ್ಯಕ್ರಮ ನಡೆದಿತ್ತು. ಬೆಂಕಿಯ ಜ್ವಾಲೆಯಲ್ಲಿ ರಾವಣನ ಪ್ರತಿಕೃತಿಯನ್ನು ದಹಿಸಿ ರಾಮ ಮತ್ತು ಸೀತೆಯರನ್ನು ವೈಭವದಿಂದ ಮೆರವಣಿಗೆ ಮಾಡಲಾಯಿತು. ಉಮಾ ಭಾರತಿ ಮತ್ತು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪ್ರದೀಪ್ ಆದಿತ್ಯ ಜೈನ್ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT