ದೆಹಲಿಯಲ್ಲಿ ಸಾಹಿತಿಗಳ ಪ್ರತಿಭಟನೆ 
ದೇಶ

ದೆಹಲಿಯಲ್ಲಿ ಸಾಹಿತಿಗಳ ಪ್ರತಿಭಟನೆ; ಸಾಹಿತ್ಯ ಅಕಾಡೆಮಿಗೆ ನಿವೇದನ ಪತ್ರ ಸಲ್ಲಿಕೆ

ದೇಶದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ಬಗ್ಗೆ ಮೌನ ತಾಳಿದೆ ಎಂಬ ಆರೋಪ ಸಾಹಿತ್ಯ ಅಕಾಡೆಮಿ ಮೇಲಿದೆ. ಈ ಬಗ್ಗೆ ಚರ್ಚಿಸುವುದಕ್ಕಾಗಿ...

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ಬಗ್ಗೆ ಮೌನ ತಾಳಿದೆ ಎಂಬ ಆರೋಪ ಸಾಹಿತ್ಯ ಅಕಾಡೆಮಿ ಮೇಲಿದೆ. ಈ ಬಗ್ಗೆ ಚರ್ಚಿಸುವುದಕ್ಕಾಗಿ ಸಾಹಿತ್ಯ ಅಕಾಡೆಮಿ ಹಿರಿಯ ಪರಾಧಿಕಾರಿಗಳ ತುರ್ತು ಸಭೆಯನ್ನು ಕರೆದಿದೆ.
ಅದೇ ವೇಳೆ ಸುಮಾರು 40 ಲೇಖಕರು, ಕವಿಗಳು ಮತ್ತು ಇತರ ಸಾಹಿತಿಗಳು ದೆಹಲಿಯ ಮಂಡಿ ಹೌಸ್‌ನಲ್ಲಿರುವ ಸಾಹಿತ್ಯ ಅಕಾಡೆಮಿಯ ಹೊರಗೆ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ
ಪ್ರೊ. ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿದ ಪ್ರತಿಭಟನಾಕಾರರಲ್ಲಿ ಒಬ್ಬ ಸಾಹಿತಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ, ದಲಿತ, ಸಾಹಿತಿಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಾಗಿದೆ. ಫಾಸಿಸಂ ದಾರಿಯನ್ನೇ ಜನ ತುಳಿಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಇಲ್ಲಿವರೆಗೆ ಪ್ರಶಸ್ತಿಗಳನ್ನು ವಾಪಸ್ ಮಾಡದೇ ಇರುವ ಸಾಹಿತಿಗಳು, ಪ್ರಸ್ತುತ ಸಭೆಯ ನಿರ್ಧಾರವೇನಿದೆ ಎಂಬುದಕ್ಕೆ ಕಾದು ಕುಳಿತಿದ್ದಾರೆ.
ಇನ್ನೊಂದು ಕಡೆ ಕೆಲವು ಸಾಹಿತಿಗಳು ಪ್ರಶಸ್ತಿ ವಾಪಸ್ ಮಾಡುತ್ತಿರುವ ಸಾಹಿತಿಗಳ ವಿರುದ್ಧವೇ ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿಯವರ ಸೈದ್ಧಾಂತಿಕ ವಿಚಾರಗಳನ್ನು ಒಪ್ಪಿಕೊಳ್ಳದೇ ಇರುವವರು ಪ್ರಶಸ್ತಿ ಹಿಂತಿರುಗಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಈ ಸಾಹಿತಿಗಳು ಆರೋಪಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್, ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!

SCROLL FOR NEXT