ಕೊಲೆಯಾದ ರಿಜ್ವಾನ್ 
ದೇಶ

ಮನೆ ಹತ್ರ ಇಲಿ ಬಿಟ್ಟಿದಕ್ಕೆ ಕೊಂದೇ ಬಿಟ್ರು!

ಇಲಿಯ ವಿಚಾರದಲ್ಲಿ ಆರಂಭವಾದ ಜಗಳ ಓರ್ವ ಕೊಲೆಯಲ್ಲಿ ಅಂತ್ಯವಾಗಿದೆ. ಇಲಿಯ ಬಿಡಲು ಹೋಗಿದ್ದ ಯುವಕರ...

ನವದೆಹಲಿ: ಇಲಿಯ ವಿಚಾರದಲ್ಲಿ ಆರಂಭವಾದ ಜಗಳ ಓರ್ವ ಕೊಲೆಯಲ್ಲಿ ಅಂತ್ಯವಾಗಿದೆ. ಇಲಿಯ ಬಿಡಲು ಹೋಗಿದ್ದ ಯುವಕರ ಮೇಲೆ ಹಲ್ಲೆ ಮಾಡಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿಯ ಗೋಕುಲ್​ಪುರಿಯಲ್ಲಿ ನಡೆದಿದೆ. 
ರಿಝ್ವಾನ್ (25) ಮತ್ತು ಮಹಮ್ಮದ್ ಅಲಿ(21) ಎಂಬ ಯುವಕರ ಮನೆಯಲ್ಲಿ ಇಲಿಗಳ ಕಾಟ ಹೆಚ್ಚಾಗಿತ್ತಂತೆ. ಒಂದು ಇಲಿಯನ್ನು ಹಿಡಿದ ಯುವಕರು ಅದನ್ನು ಕೊಲ್ಲದೇ, ಮರುದಿನ ಬೆಳಿಗ್ಗೆ ಅಲ್ಲೇ ಹತ್ತಿರದಲ್ಲಿದ್ದ ಮೋರಿಗೆ ಬಿಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಪಕ್ಕದ ಮನೆಯವರೊಂದಿಗೆ ಜಗಳವಾಗಿದೆ.
ಇಲಿಯನ್ನು ಇಲ್ಲಿ ಬಿಡಬೇಡಿ, ಮೋರಿಯಲ್ಲಿ ಇಲಿ ಬಿಟ್ಟರೆ ಆ ಇಲಿ ನಮ್ಮ ಮನೆಗೆ ಬರುತ್ತದೆ ಎಂದು ನೆರಮನೆಯವರು ಹೇಳಿದ್ದಾರೆ. ಈ ವೇಳೆ ಎರಡು ಕಡೆ ಮಾತಿನ ಚಕಮಕಿ ಜೋರಾಗಿ, ನೆರಮನೆಯವರು ರಿಜ್ವಾನ್ ಮತ್ತು ಮಹಮ್ಮದ್ ಅಲಿಗೆ ಚೂರಿಯಿಂದ ಇರಿದಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಿಝ್ವಾನ್ ಮತ್ತು ಮಹಮ್ಮದ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ರಿಜ್ವಾನ್ ಮೃತಪಟ್ಟಿದ್ದು, ಮಹಮ್ಮದ್ ಚಿಕಿತ್ಸೆ ಪಡೆಯುತ್ತಿದ್ದಾನೆ. 
ಅಲ್ಲಿನ ಸ್ಥಳಿಯರ ಹೇಳಿಕೆ ಪ್ರಕಾರ ಎರಡು ಕುಟುಂಬಗಳಿಗೂ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಿರುತ್ತದೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT