ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ (ಸಂಗ್ರಹ ಚಿತ್ರ) 
ದೇಶ

ಅಜಂಖಾನ್ ಹೇಳಿಕೆ: ಅಖಿಲೇಶ್ ರಿಂದ ಸ್ಪಷ್ಟನೆ ಕೇಳಿದ ಬಿಜೆಪಿ

ಮೊಬೈಲ್ ನಿಂದಲೇ ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ನಾಯಕ ಅಜಂಖಾನ್ ಅವರ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಬಿಜೆಪಿಯು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಶನಿವಾರ ಕೇಳಿದೆ...

ಲಖನೌ: ಮೊಬೈಲ್ ನಿಂದಲೇ ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ನಾಯಕ ಅಜಂಖಾನ್ ಅವರ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಬಿಜೆಪಿಯು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಶನಿವಾರ ಕೇಳಿದೆ.

ಅಜಂಖಾನ್ ಹೇಳಿಕೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ಪಥಕ್ ಅವರು, ಅಖಿಲೇಖ್ ಯಾದವ್ ಅವರು ಡಿಜಿಟಲ್ ಯೋಜನೆಗಳಿಗೆ ದೊಡ್ಡ ಬೆಂಬಲಿಗರಾಗಿದ್ದಾರೆ. ಆದರೆ, ಅವರ ಪಕ್ಷದ ನಾಯಕರಿಂದಲೇ ಇಂದು ಡಿಜಿಟಲ್ ಕುರಿತಂತೆ ವಿರೋಧದ ಹೇಳಿಕೆಗಳು ಬರುತ್ತಿವೆ. ಹೀಗಾಗಿ ಅಜಂಖಾನ್ ಅವರ ಹೇಳಿಕೆ ಕುರಿತಂತೆ ಶೀಘ್ರವೇ ಯಾದವ್ ಅವರು ಸ್ಪಷ್ಟನೆ ನೀಡಬೇಕೆಂದು ಹೇಳಿದ್ದಾರೆ.

ಡಿಜಿಟಲ್ ಯೋಜನೆಗೆ ಬೆಂಬಲ ವ್ಯಕ್ತಪಡಿಸುವ ಯಾದವ್ ಅವರು ಈ ಹಿಂದೆ ರಾಜ್ಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಕೆಲವು ಪ್ರದೇಶಗಳಲ್ಲಿ ಉಚಿತ ವೈಫೈ ಸೌಲಭ್ಯಗಳನ್ನು ನೀಡಿದ್ದರು. ಇದಲ್ಲದೆ, ಅಧಿಕೃತ ಸಾಮಾಜಿಕ ಆರೋಗ್ಯ ಹೋರಾಟಗಾರರಿಗೆ ಆರೋಗ್ಯ ಅಭಿವೃದ್ಧಿಯಾಗಲೆಂದು ಸ್ಮಾರ್ಟ್ ಫೋನ್ ಗಳನ್ನು ನೀಡಿದ್ದರು. ಡಿಜಿಟಲ್ ಯೋಜನೆಗಳಿಗೆ ಬೆಂಬಲ ಸೂಚಿಸುವ ಮಂತ್ರಿಗಳು ಇದೀಗ ಅಜಂಖಾನ್ ಅವರ ಹೇಳಿಕೆಗೆ ಸ್ಪಷ್ಟನೆ ನೀಡಲಿ. ಹೇಳಿಕೆ ಕುರಿತಂತೆ ಅಖಿಲೇಶ್ ಅವರು ಮೌನವಹಿಸಿದರೆ ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಉತ್ತರ ಹಾಗೂ ಭದ್ರತಾ ವಾತಾವರಣ ನಿರ್ಮಾಣವಾಗಲು ಸರ್ಕಾರ ಮೊದಲು ಕಾನೂನು ಮತ್ತು ಆದೇಶಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.

ನಿನ್ನೆಯಷ್ಟೇ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಅವರು, ಇಂದು ಸಣ್ಣಪುಟ್ಟ ಮಕ್ಕಳೆಲ್ಲಾ ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಮೊಬೈಲ್ ಫೋನುಗಳು, ಮೊಬೈಲ್ ಫೋನುಗಳಲ್ಲಿ ಉಚಿತವಾಗಿ ಅಶ್ಲೀಲ ಚಿತ್ರಗಳು ದೊರೆಯುತ್ತಿದ್ದು, ಇದರಿಂದ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT