ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಲಲಿತ್ ಮೋದಿ (ಸಂಗ್ರಹ ಚಿತ್ರ) 
ದೇಶ

ಲಲಿತ್ ಮೋದಿ ಗಡಿಪಾರಿಗೆ ಪತ್ರ ಬರೆದಿದ್ದ ಚಿದಂಬರಂ

ಐಪಿಎಲ್ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಲಲಿತ್ ಮೋದಿಯನ್ನು ಬ್ರಿಟನ್‍ನಿಂದ ಗಡಿಪಾರು ಮಾಡಲು ಹಿಂದಿನ ಯುಪಿಎ ಸರ್ಕಾರ ಪ್ರಯತ್ನಿಸಿತ್ತು...

ನವದೆಹಲಿ: ಐಪಿಎಲ್ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಲಲಿತ್ ಮೋದಿಯನ್ನು ಬ್ರಿಟನ್‍ನಿಂದ ಗಡಿಪಾರು ಮಾಡಲು ಹಿಂದಿನ ಯುಪಿಎ ಸರ್ಕಾರ ಪ್ರಯತ್ನಿಸಿತ್ತು. ಈ  ಬಗ್ಗೆ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ 2013ರ ಆಗಸ್ಟ್ ನಲ್ಲಿ ಪತ್ರ ಬರೆದಿದ್ದ ಬಗ್ಗೆ `ಎನ್‍ಡಿಟಿವಿ' ವರದಿ ಮಾಡಿದೆ.

ಚಿದಂಬರಂ ಅವರು ಈ ಹಿಂದೆಯೇ ತಾವು ಬ್ರಿಟನ್ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದರು. ಈಗ ಆ ಪತ್ರವನ್ನು ಸುದ್ದಿವಾಹಿನಿಯೇ ಬಹಿರಂಗ ಮಾಡಿದೆ. ``ಕೇಂದ್ರ ಸರ್ಕಾರ ಲಲಿತ್ ಮೋದಿಯನ್ನು ಹಸ್ತಾಂತರ ಮಾಡಿ ಎಂದು ಕೇಳುತ್ತಿಲ್ಲ. ಅದರ ಬದಲಿಗೆ ಅವರನ್ನು ಗಡಿಪಾರು ಮಾಡಬೇಕು.  ಏಕೆಂದರೆ ಈಗಾಗಲೇ ಭಾರತ ಸರ್ಕಾರ ಲಲಿತ್ ಪಾಸ್‍ಪೋರ್ಟ್ ಅನ್ನು ರದ್ದು ಮಾಡಿದೆ. ಇದರ ಜತೆಗೆ ಲಲಿತ್ ಮೋದಿ ಬಳಿ ಯಾವುದೇ ಅಧಿಕೃತ ದಾಖಲೆಗಳು ಇಲ್ಲ ಎಂದು ಕೇಂದ್ರ ಸರ್ಕಾರ ಭಾವಿಸುತ್ತಿದೆ'' ಎಂದು ಚಿದಂಬರಂ ಪತ್ರದಲ್ಲಿ ಬರೆದಿದ್ದರು.

ಹಸ್ತಾಂತರ ಪ್ರಕ್ರಿಯೆ ವಿಳಂಬವಾಗುತ್ತದೆ. ಹೀಗಾಗಿ ಅವರನ್ನು ಗಡಿಪಾರು ಮಾಡಿ ಎಂದು ಮನವಿ ಮಾಡಿದ್ದರು. ಅದಕ್ಕೆ 2013ರ ಸೆ.23ರಂದು ಮಾರೋಲೆ ಬರೆದಿದ್ದ ಬ್ರಿಟನ್‍ನ ವಿದೇಶಾಂಗ  ಇಲಾಖೆ ``ಭಾರತ ಸರ್ಕಾರ ಲಲಿತ್ ಮೋದಿ ಪ್ರಕರಣದಲ್ಲಿ ತೋರಿಸುತ್ತಿ ರುವ ಆಸಕ್ತಿಯನ್ನು ಕೊಂಡಾಡುತ್ತದೆ. ಆದರೆ ಹಸ್ತಾಂತರದ ಬಗ್ಗೆ ಸೂಕ್ತ ಮಾರ್ಗದ ಮೂಲಕ ಮನವಿ ಸಲ್ಲಿಸಿದಲ್ಲಿ ಅದನ್ನು  ಪರಿಗಣಿಸಲಾಗುತ್ತದೆ''ಎಂದು ಬರೆದಿತ್ತು.

ಇದೇ ಸಾಕ್ಷಿ: ಈ ಬಗ್ಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ``ಯುಪಿಎ ಸರ್ಕಾರ ಲಲಿತ್ ಮೋದಿಯನ್ನು ಗಡಿಪಾರು ಮಾಡಲು ಪ್ರಯತ್ನಿಸಿತ್ತು ಎನ್ನುವುದಕ್ಕೆ ಇದುವೇ ಸಾಕ್ಷಿ'' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT