ಸಾಂದರ್ಭಿಕ ಚಿತ್ರ 
ದೇಶ

ಪ್ರಧಾನಿ ರ್ಯಾಲಿ: ಧರೆಗುರುಳಿದ ನೂರಾರು ಮರಗಳು

ನವೆಂಬರ್ ಒಂದರಂದು ಬಿಹಾರ ವಿಧಾನಸಭೆಗೆ ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಪ್ರಚಾರ ನಡೆಸಲು ಪ್ರಧಾನ ಮಂತ್ರಿ...

ಪಾಟ್ನಾ: ನವೆಂಬರ್  ಒಂದರಂದು ಬಿಹಾರ ವಿಧಾನಸಭೆಗೆ ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಪ್ರಚಾರ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾದೇಪುರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರ್ಯಾಲಿ ನಡೆಯುವ ಸ್ಥಳದ ಸುತ್ತಮುತ್ತ ಇರುವ ನೂರಾರು ಮರಗಳನ್ನು ಕಡಿದುರುಳಿಸಲಾಗಿದೆ.

ಮೋದಿಯವರು ರ್ಯಾಲಿ ನಡೆಸಲು ಸ್ಥಳಾವಕಾಶ ಕಲ್ಪಿಸಲು ಬಿ.ಪಿ.ಮಂಡಲ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಲ್ಲಿ ನೂರಾರು ಫಲಭರಿತ ಮರಗಳನ್ನು ಧರೆಗುರುಳಿಸಲಾಗಿದೆ. ಕೆಲವು ಮರಗಳ ರೆಂಬೆಗಳನ್ನು ಕಡಿದುಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರದಿಯು ಮಾದೇಪುರಟೈಮ್ಸ್ ನ್ಯೂಸ್ ಪೋರ್ಟಲ್ ನಲ್ಲಿ ಮೊದಲು ಪ್ರಕಟಗೊಂಡಿತ್ತು. ಇದರ ಸಂಪಾದಕರಾದ ರುದ್ರ ನಾರಾಯನ್ ಯಾದವ್ ಹೇಳುವ ಪ್ರಕಾರ, ಸಾವಿರ ವರ್ಷಗಳಿಗೂ ಅಧಿಕ ವರ್ಷದ ಅನೇಕ ವೈವಿಧ್ಯತೆಯ ಸುಮಾರು 400ರಿಂದ 500 ಮರಗಳು ನಾಶಗೊಂಡಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಮೊಹಮ್ಮದ್ ಸೊಹೈಲ್ ಅವರನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಬಿಹಾರದ ಮಾದೇಪುರ ಮತ್ತು ಸಹರ್ಸ ಜಿಲ್ಲೆಗಳನ್ನೊಳಗೊಂಡ ಪ್ರವಾಹ ನಿರತ ಕೋಸಿ ಪ್ರಾಂತ್ಯದಲ್ಲಿ ಪರಿಸರ ಕಾರ್ಯಕರ್ತ ರಾಜೀವ್, ಚುನಾವಣಾ ರ್ಯಾಲಿಗೆ ನೂರಾರು ಮರಗಳನ್ನು ಧರೆಗುರುಳಿಸಿರುವುದು ಬೇಸರದ ವಿಷಯ ಎಂದು ಹೇಳಿದ್ದಾರೆ.

ಪರಿಸರ ಸಂರಕ್ಷಣೆ, ಪರಿಸರ ಕಾಳಜಿ ಬಗ್ಗೆ ಜನರಿಗೆ ಉತ್ತಮ ಸಂದೇಶ ನೀಡಬೇಕಾದ ಪ್ರಧಾನಿಯವರೇ ತಮ್ಮ ರ್ಯಾಲಿಗೆ ಮರಗಳನ್ನು ಕಡಿಯುವುದನ್ನು ತಡೆಯಬಹುದಾಗಿತ್ತು ಎಂದು ರಾಜೀವ್ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಅಧಿಕಾರಿ ಬಿ.ಎನ್. ವಿವೇಕ್, ಜಾಗದಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡಲಾಗಿತ್ತೇ ಹೊರತು ಮರಗಳನ್ನು ಕಡಿಯಲು ಅಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸ್ಥಳೀಯ ನಿವಾಸಿಗಳನ್ನು ವಿಚಾರಿಸಿದಾಗ, ನಾವು ಪ್ರತಿಭಟನೆ ನಡೆಸಿ ನಮ್ಮ ಸಿಟ್ಟು, ಆಕ್ರೋಶವನ್ನು ಹೊರಹಾಕಬಹುದು, ಮತ್ತೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯಾದವ್ ಜಿಲ್ಲಾಡಳಿತಕ್ಕೆ  ಪತ್ರ ಬರೆದು, ರ್ಯಾಲಿ ನಡೆಯುವುದಕ್ಕೆ ಮೊದಲು ಮತ್ತು ನಂತರ ಯಾವುದೇ ಹಾನಿ ಮತ್ತು ನಷ್ಟವಾದಲ್ಲಿ ಅದನ್ನು ಪಕ್ಷವೇ ಭರಿಸುತ್ತದೆ. ರ್ಯಾಲಿ ಮುಗಿದ ನಂತರ ಹೊಸ ಗಿಡಗಳನ್ನು ನೆಡುತ್ತೇವೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT