ಬಸ್ ಉರುಳಿ ಬಿದ್ದಿರುವುದು 
ದೇಶ

ಬಸ್ ಕಂದಕಕ್ಕೆ ಉರುಳಿ 10 ಮಂದಿ ಸಾವು, 9 ಜನರಿಗೆ ಗಾಯ

ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಸಾವಿಗೀಡಾಗಿ ಇತರ 9 ಮಂದಿ ಗಾಯಗೊಂಡಿರುವ...

ಮಿಜೋರಾಂ: ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಸಾವಿಗೀಡಾಗಿ ಇತರ 9 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಮಿಜೋರಾಂನಲ್ಲಿ ನಡೆದಿದೆ.

ಮಿಜೋರಾಂನ ಲಾಂಗ್ ತ್ಲೈ ನಿಂದ ರಾಜಧಾನಿ ಐಜವಲ್ ಕಡೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ರಾಮ್ಲೈತುಯಿ ಗ್ರಾಮದಲ್ಲಿ ಕಂದಕಕ್ಕೆ ಉರುಳಿಬಿತ್ತು.

ಅಪಘಾತ ಸಂಭವಿಸಿದ ಕೂಡಲೇ ಸುತ್ತಮುತ್ತಲ ಗ್ರಾಮಸ್ಥರು ಆಗಮಿಸಿ ಪೊಲೀಸರು ಮತ್ತು ರಾಜ್ಯ ವಿಪತ್ತು ತುರ್ತು ಪಡೆಯ ಸಿಬ್ಬಂದಿಗಳ ನೆರವಿನಿಂದ ಶವಗಳನ್ನು ಹೊರತೆಗೆದು ಬೇರೆಡೆಗೆ ಸಾಗಿಸಿದರು. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

 ಬಸ್ ಉರುಳಿ ಬೀಳಲು ಚಾಲಕ ಮದ್ಯಪಾನ ಮಾಡಿರುವುದು ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದರೂ, ಎದುರಿನಿಂದ ವೇಗವಾಗಿ ಬಂದ ಟ್ರಕ್ ಜೊತೆ ಢಿಕ್ಕಿಯನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್ಸು ಉರುಳಿ ಪಕ್ಕದ ಕಂದಕಕ್ಕೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT