ಎಚ್.ಎಲ್ ದತ್ತು 
ದೇಶ

ದ್ವೇಷದ ಅಪರಾಧಗಳಿಗೆ ಕೋರ್ಟ್ ಕಠಿಣ ಶಿಕ್ಷೆ ನೀಡುತ್ತೆ: ನ್ಯಾ.ಎಚ್.ಎಲ್ ದತ್ತು

ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅಂಥಹ ಅಪರಾಧಿಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ,

ನವದೆಹಲಿ; ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದೂ, ಅಂಥಹ ಪ್ರಕರಣಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನಲ್ಲಿ ನ್ಯಾಯಮೂರ್ತಿ ದತ್ತು ಅವರು,  ಕಾನೂನೇ ಸರ್ವೋಚ್ಚವಾಗಿರುವ ಭಾರತದಲ್ಲಿ ಕಾನೂನಿಗೆ ಗರಿಷ್ಠ ಪ್ರಾಧಾನ್ಯವಿದೆ. ಅಂತೆಯೇ ಕಾನೂನಿನ ಆಡಳಿತವನ್ನು ಎತ್ತಿ ಹಿಡಿಯಲು ನ್ಯಾಯಾಲಯಗಳು ತಮ್ಮಿಂದ ಸಾಧ್ಯವಿರುವ ಎಲ್ಲ ಯತ್ನಗಳನ್ನು ಮಾಡುತ್ತಿವೆ. ಅಸಹಿಷ್ಣುತೆಯ ದ್ವೇಷಾಪರಾಧಗಳಿಗೆ ನ್ಯಾಯಾಲಯಗಳು ಕಠಿಣ ಶಿಕ್ಷೆ ನೀಡಲಿವೆ ಎಂದು ತಿಳಿಸಿದ್ದಾರೆ.

ವಿಭಜಕ ಶಕ್ತಿಗಳಿಂದ ಪ್ರಜೆಗಳನ್ನು ರಕ್ಷಿಸುವ ಮೂಲಭೂತ ಕರ್ತವ್ಯ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರಕಾರದ್ದಾಗಿರುತ್ತದೆ ಎಂದು ಹೇಳಿದ ದತ್ತು, ಕಾನೂನಿನ ಚೌಕಟ್ಟಿನಲ್ಲಿ ದೇಶದ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಅನುಭವಿಸಲು ತಾವು ನೆರವು ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT