ಎಚ್.ಎಲ್ ದತ್ತು 
ದೇಶ

ದ್ವೇಷದ ಅಪರಾಧಗಳಿಗೆ ಕೋರ್ಟ್ ಕಠಿಣ ಶಿಕ್ಷೆ ನೀಡುತ್ತೆ: ನ್ಯಾ.ಎಚ್.ಎಲ್ ದತ್ತು

ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅಂಥಹ ಅಪರಾಧಿಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ,

ನವದೆಹಲಿ; ದೇಶದಲ್ಲಿ ದ್ವೇಷ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದೂ, ಅಂಥಹ ಪ್ರಕರಣಗಳ ವಿರುದ್ಧ ನ್ಯಾಯಾಲಯ ನಿಷ್ಠುರವಾಗಿ ತೀರ್ಪು ನೀಡುತ್ತದೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನಲ್ಲಿ ನ್ಯಾಯಮೂರ್ತಿ ದತ್ತು ಅವರು,  ಕಾನೂನೇ ಸರ್ವೋಚ್ಚವಾಗಿರುವ ಭಾರತದಲ್ಲಿ ಕಾನೂನಿಗೆ ಗರಿಷ್ಠ ಪ್ರಾಧಾನ್ಯವಿದೆ. ಅಂತೆಯೇ ಕಾನೂನಿನ ಆಡಳಿತವನ್ನು ಎತ್ತಿ ಹಿಡಿಯಲು ನ್ಯಾಯಾಲಯಗಳು ತಮ್ಮಿಂದ ಸಾಧ್ಯವಿರುವ ಎಲ್ಲ ಯತ್ನಗಳನ್ನು ಮಾಡುತ್ತಿವೆ. ಅಸಹಿಷ್ಣುತೆಯ ದ್ವೇಷಾಪರಾಧಗಳಿಗೆ ನ್ಯಾಯಾಲಯಗಳು ಕಠಿಣ ಶಿಕ್ಷೆ ನೀಡಲಿವೆ ಎಂದು ತಿಳಿಸಿದ್ದಾರೆ.

ವಿಭಜಕ ಶಕ್ತಿಗಳಿಂದ ಪ್ರಜೆಗಳನ್ನು ರಕ್ಷಿಸುವ ಮೂಲಭೂತ ಕರ್ತವ್ಯ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರಕಾರದ್ದಾಗಿರುತ್ತದೆ ಎಂದು ಹೇಳಿದ ದತ್ತು, ಕಾನೂನಿನ ಚೌಕಟ್ಟಿನಲ್ಲಿ ದೇಶದ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಅನುಭವಿಸಲು ತಾವು ನೆರವು ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT