(ಸಂಗ್ರಹ ಚಿತ್ರ) 
ದೇಶ

ದಾದ್ರಿ ದಾಳಿಗೆ ಅಖ್ಲಾಕ್ ಮಗನಿಗಿದ್ದ ಹಿಂದೂ ಹುಡುಗಿಯೊಂದಿಗಿನ ಪ್ರೇಮವೇ ಕಾರಣ: ಎಬಿವಿಪಿ

ಗೋಮಾಂಸ ಸೇವನೆ ಶಂಕೆಯಿಂದಾಗಿ ಉತ್ತರ ಪ್ರದೇಶದ ದಾದ್ರಿಯ ಬಿಸಡಾಗಾಂವ್ ನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ದು ಹಾಗೂ ಮನೆಗೆ ನುಗ್ಗಿ ದಾಳಿ ಮಾಡಿದ ಪ್ರಕರಣಕ್ಕೆ ಪ್ರಮುಖ ಕಾರಣ ಹತ್ಯೆಯಾದ ವ್ಯಕ್ತಿ ಅಖ್ಲಾಕ್ ಮಗನಿಗಿದ್ದ ಪ್ರೇಮ ವ್ಯವಹಾರವೇ ಕಾರಣ ಎಂದು ಅಖಿಲ...

ಲಖನೌ: ಗೋಮಾಂಸ ಸೇವನೆ ಶಂಕೆಯಿಂದಾಗಿ ಉತ್ತರ ಪ್ರದೇಶದ ದಾದ್ರಿಯ ಬಿಸಡಾಗಾಂವ್ ನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ್ದು ಹಾಗೂ ಮನೆಗೆ ನುಗ್ಗಿ ದಾಳಿ ಮಾಡಿದ ಪ್ರಕರಣಕ್ಕೆ ಪ್ರಮುಖ ಕಾರಣ ಹತ್ಯೆಯಾದ ವ್ಯಕ್ತಿ ಅಖ್ಲಾಕ್ ಮಗನಿಗಿದ್ದ ಪ್ರೇಮ ವ್ಯವಹಾರವೇ ಕಾರಣ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸೋಮವಾರ ಹೇಳಿಕೊಂಡಿದೆ.

ಈ ಕುರಿತಂತೆ ಖಾಸಗಿ ಪತ್ರಿಕೆಯೊಂದರಲ್ಲಿ ಮಾತನಾಡಿರುವ ಎಬಿವಿಪಿಯ ಅವಧ್ ವಲಯದ ಸಂಘಟನಾ ಕಾರ್ಯದರ್ಶಿ ಸತ್ಯ ಭಾನ್ ಅವರು, ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣವು ಗೋಮಾಂಸ ಸೇವನೆ ವದಂತಿಗೆ ಸಂಬಂಧಿಸಿದ್ದಲ್ಲ. ದಾದ್ರಿ ಪ್ರಕರಣಕ್ಕೆ ಅಖ್ಲಾಕ್ ನ ಇಬ್ಬರು ಮಕ್ಕಳಲ್ಲಿ ಒಬ್ಬನಿಗೆ ಹಿಂದೂ ಯುವತಿಯೊಂದಿಗಿದ್ದ ಪ್ರೇಮ ವ್ಯವಹಾರವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಖಾಸಗಿ ಪತ್ರಿಕೆಯ ವರದಿಯಲ್ಲಿ ಅಖ್ಲಾಕ್ ಮಕ್ಕಳಲ್ಲಿ ಒಬ್ಬನಿಗೆ ಸ್ಧಳೀಯ ಹಿಂದೂ ಯುವತಿಯೊಂದಿಗೆ ಪ್ರೇಮವಿರುವ ಕುರಿತಂತೆ ಉತ್ತರ ಪ್ರದೇಶದ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿ ಅವರ ಕುಟುಂಬದ ಮೇಲೆಯೂ ದಾಳಿ ನಡೆದಿದೆ ಎಂದು ಸತ್ಯಭಾನ್ ಹೇಳಿರುವುದಾಗಿ ಹೇಳಿಕೊಂಡಿದೆ.

ದಾದ್ರಿ ಪ್ರಕರಣವನ್ನು ವಿವಿಧ ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ, ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದಾಗಿ ಪ್ರಕರಣವನ್ನು ಗೋಮಾಂಸ ಸೇವನೆ ಶಂಕೆಗೆ ಬದಲಾಯಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಕ್ಕಾಗಿ ಅಜಂಖಾನ್ ಅವರು ವಿಶ್ವಸಂಸ್ಥೆಗೆ ಪತ್ರ ಬರೆಯುತ್ತೇನೆಂದು ಹೇಳಿರುವುದು ಭಾರತದ ಘನತೆಗೆ ಧಕ್ಕೆಯುಂಟು ಮಾಡುತ್ತದೆ. ಈ ವಿಷಯವನ್ನು ಸಮಾವೇಶದಲ್ಲಿ ಸ್ಪಷ್ಟಪಡಿಸಲಾಗುತ್ತದೆ.

ದಾದ್ರಿ ಪ್ರಕರಣವು ಇದೀಗ ಓಲೈಕೆ ರಾಜಕಾರಣದ ಒಂದು ಭಾಗವಾಗಿಬಿಟ್ಟಿದೆ. ಸಂತ್ರಸ್ತರು ಒಂದು ನಿರ್ಧಿಷ್ಟ ಸಮುದಾಯಕ್ಕೆ ಸೇರಿದವರಾದುದರಿಂದ ಉತ್ತರ ಪ್ರದೇಶ ಸರ್ಕಾರ ಅವರಿಗೆ ಬೃಹತ್ ಮೊತ್ತದ ಪರಿಹಾರವನ್ನು ಘೋಷಿಸಿದೆ.

ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ರಾಜ್ಯ ಮಟ್ಟದ ಸಮಾವೇಶವೊಂದಕ್ಕೆ ಸೀತಾಪುರ್ ನಲ್ಲಿ ಸಿದ್ಧತೆ ನಡೆಯುತ್ತಿದೆ. ನವೆಂಬರ್ 1 ರಿಂದ 3ರವರೆಗೆ ಈ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಎಬಿವಿಪಿಯು ದಾದ್ರಿ ಪ್ರಕರಣಕ್ಕೆ ಪ್ರಮುಖ ಕಾರಣ, ಕೋಮು ಸೌಹಾರ್ದತೆ, ಮಹಿಳಾ ರಕ್ಷಣೆ, ಶಿಕ್ಷಣದ ವಾಣಿಜ್ಯೀಕರಣ, ವಿದ್ಯಾರ್ಥಿ ಸಂಘ ಚುನಾವಣೆ, ಭಯೋತ್ಪಾದನೆ ಮತ್ತು ನಿರುದ್ಯೋಗದಂತಹ ವಿವಿಧ ವಿಷಯಗಳನ್ನು ಸಮಾವೇಶದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT