ಜಂತರ್ ಮಂತರ್ ಪಕ್ಕದಲ್ಲಿರುವ ಕೇರಳ ಹೌಸ್ ( ಕೃಪೆ: ವಿಕಿಮೀಡಿಯಾ) 
ದೇಶ

ಮೆನುನಲ್ಲಿ ಬೀಫ್ ಕೈ ಬಿಟ್ಟ ಕೇರಳ ಹೌಸ್

ಬೀಫ್ ಬಡಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಜಂತರ್ ಮಂತರ್ ಪಕ್ಕದಲ್ಲಿರುವ ಕೇರಳ ಹೌಸ್ ಗೆ ಪೊಲೀಸರು...

ನವದೆಹಲಿ:  ಬೀಫ್ ಬಡಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಜಂತರ್ ಮಂತರ್ ಪಕ್ಕದಲ್ಲಿರುವ ಕೇರಳ ಹೌಸ್ ಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಗೋಮಾಂಸ ವಿವಾದಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ದೆಹಲಿ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ವಹಿಸಿದ್ದಾರೆ.
ಮುಂಜಾನೆ 4.15ರ ವೇಳೆಗೆ  ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಬಂದಿತ್ತು. ಪೊಲೀಸ್ ಮೂಲಗಳ ಪ್ರಕಾರ ಕರೆ ಮಾಡಿರುವ ವ್ಯಕ್ತಿಯ ಹೆಸರು ವಿಷ್ಣು ಗುಪ್ತಾ. ಈತ ಹಿಂದೂ ಸೇನೆಯ ನಾಯಕನಾಗಿದ್ದಾನೆ. ಕೇರಳ ಹೌಸ್ ನಲ್ಲಿ ಬೀಫ್ ಪದಾರ್ಥ ಮಾಡಲಾಗಿದೆ ಎಂದು ಈತ ದೂರಿದ್ದಾನೆ.
ಈ ಬಗ್ಗೆ ಕೇರಳ ಹೌಸ್‌ನಲ್ಲಿ ವಿಚಾರಿಸಿದಾಗ ತಾವು ಎತ್ತಿನ ಮಾಂಸದ ಪದಾರ್ಥ ಮಾಡುತ್ತಿದ್ದು, ಅದನ್ನು ಮೆನುವಿನಲ್ಲಿ ಬೀಫ್ ಎಂದೇ ಕೊಡಲಾಗಿದೆ. ಇದೀಗ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಮೆನುವಿನಿಂದ ಬೀಫ್ ಕೈ ಬಡಲು ನಾವು ನಿರ್ಧರಿಸಿದ್ದೇವೆ ಎಂದು ಕೇರಳ ಹೌಸ್‌ನವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025| ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ರಾಜ್ಯದಲ್ಲಿ ಹಲವೆಡೆ IMD Yellow alert; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT