ಛೋಟಾ ರಾಜನ್ 
ದೇಶ

ಛೋಟಾ ರಾಜನ್ ಸೆರೆಗೆ ಭಾರತದ ತಂತ್ರ ಕಾರಣ?

ಭೂಗತ ಪಾತಕಿ ಛೋಟಾ ರಾಜನ್ ಬಂಧನ ಅಥವಾ ಶರಣಾಗತಿಗೆ ಕಾರಣವಾಗಿದ್ದು ರಾಷ್ಟ್ರೀಯ ಭದ್ರತಾ ಸಲಹೆಗಾರ...

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಬಂಧನ ಅಥವಾ ಶರಣಾಗತಿಗೆ ಕಾರಣವಾಗಿದ್ದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್. ಹೀಗಂತ ಸರ್ಕಾರದ ಮೂಲಗಳು ಹೇಳಿವೆ. 
70 ವರ್ಷದ ದೋವಲ್ ಅವರು ಕೆಲದಿನಗಳಿಂದ ಇಂಡೋನೇಶಿಯಾದ `ಕೆಲವರ' ಜತೆ¸ ಸಂಪರ್ಕದಲ್ಲಿದ್ದು, ಛೋಟಾ ರಾಜನ್ ಬಂಧನಕ್ಕಾಗಿ ಯೋಜನೆ ರೂಪಿಸುತ್ತಿದ್ದರಂತೆ. ಅಲ್ಲದೆ ಛೋಟಾ ರಾಜನ್ ಕೂಡ ಅನಾರೋಗ್ಯದಿಂದಾಗಿ ಬಸವಳಿದಿದ್ದಾನೆ. 
ಅಲ್ಲದೆ ವಿರೋಧಿ ಗುಂಪುಗಳು ಈತನ ಹತ್ಯೆಗೆ ಸಂಚು ರೂಪಿಸುತ್ತಿದ್ದರಿಂದ ಆತ ಕೂಡ ತಪ್ಪಿಸಿಕೊಳ್ಳಬೇಕಿತ್ತು. ಹೀಗಾಗಿ ಶರಣಾಗತಿಯ ಮಾರ್ಗ ಹುಡುಕುತ್ತಿದ್ದ ಎಂದು ಹೇಳಲಾಗಿದೆ. ಅಲ್ಲದೆ, ಭೂಗತ ದೊರೆ ದಾವೂದ್ ಇಬ್ರಾಹಿಂನ ನೆಲೆ ಮತ್ತು ಆತನ ಅಪರಾಧ ಕೆಲಸಗಳ ಬಗ್ಗೆ ಸಾಕ್ಷ್ಯ ಸಂಗ್ರಹಿಸಲು ಛೋಟಾ ರಾಜನ್ ಸಹಾಯ ಬೇಕು. 
ಈ ಹಿನ್ನೆಲೆಯಲ್ಲಿಯೇ ದೋವಲ್, ಸರಿಯಾದ ಯೋಜನೆ ರೂಪಿಸಿ ಛೋಟಾ ರಾಜನ್‍ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಕತಾಳೀಯವೆಂಬಂತೆ ಕೆಲ ದಿನಗಳ ಹಿಂದೆ, ಛೋಟಾ ರಾಜನ್‍ಗೆ ಸೇರಿದ ಖುಷಿ ಡೆವಲಪರ್ಸ್ ಮೇಲೆ ಮುಂಬೈ ಕ್ರೈಂಬ್ರಾಂಚ್‍ನ ಅಧಿಕಾರಿಗಳು ದಾಳಿ ಮಾಡಿದ್ದರು. 
ಜತೆಗೆ ಛೋಟಾ ರಾಜನ್ ಸಹೋದರ ಮತ್ತು ರಾಜಕಾರಣಿ ದೀಪಕ್ ನಿಖಲ್ಜೆ ಫ್ಲಾಟ್ ಮೇಲೂ ದಾಳಿ ನಡೆದಿತ್ತು. ಅಜಿತ್ ದೋವಲ್, ಈ ಹಿಂದೆ ಗುಪ್ತಚರ ಇಲಾಖೆಯ ನಿರ್ದೇಶಕರಾಗಿದ್ದವರು. ಹೀಗಾಗಿ ಛೋಟಾ ರಾಜನ್ ನ ಇರುವಿಕೆ ಮತ್ತು ಆತನ ಪಾತಕಗಳ ಬಗ್ಗೆ ತಿಳಿದುಕೊಂಡಿದ್ದರು.
2008ರಲ್ಲಿ ದೋವಲ್, ದಾವೂದ್ ಇಬ್ರಾಹಿಂ ವಿರುದ್ಧ ಕಾರ್ಯಾಚರಣೆ ನಡೆಸುವ ಸಲುವಾಗಿ ಯೋಜನೆಯೊಂದನ್ನು ತಯಾರಿಸಿದ್ದರು. 
ಇದೊಂದು ಐತಿಹಾಸಿಕಗಳಿಗೆ: ಛೋಟಾ ರಾಜನ್ ಬಂಧನ ಭಾರತದ ಪಾಲಿಗೆ ಐತಿಹಾಸಿಕ ಗಳಿಗೆ ಎಂದು ನಿವೃತ್ತ ಪೊಲೀಸ್ ಅಧಿಕಾರಿಗಳು ಬಣ್ಣಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT