ಕೇರಳ ಗೃಹ ಸಚಿವ ರಮೇಶ್ ಚನ್ನಿಟಾಲ ಇಛೋಡ್ ಚಾಂಡಿ (ಸಂಗ್ರಹ ಚಿತ್ರ) 
ದೇಶ

ಕೇರಳ ಹೌಸ್ ಮೇಲೆ ದೆಹಲಿ ಪೊಲೀಸ್ ದಾಳಿ ಪ್ರಕರಣ: ನಜೀಬ್ ಜಂಗ್ ಗೆ ದೂರು

ಗೋಮಾಂಸ ವಿತರಣೆ ಆರೋಪದ ಮೇಲೆ ಮಂಗಳವಾರ ಕೇರಳ ಹೌಸ್ ಮೇಲೆ ನಡೆದ ಪೊಲೀಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ದೂರು ನೀಡುವುದಾಗಿ ಕೇರಳ ಗೃಹ ಸಚಿವ ರಮೇಶ್ ಚನ್ನಿಟಾಲ ಇಛೋಡ್ ಚಾಂಡಿ ಹೇಳಿದ್ದಾರೆ...

ನವದೆಹಲಿ: ಗೋಮಾಂಸ ವಿತರಣೆ ಆರೋಪದ ಮೇಲೆ ಮಂಗಳವಾರ ಕೇರಳ ಹೌಸ್ ಮೇಲೆ ನಡೆದ ಪೊಲೀಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್  ಜಂಗ್ ಅವರಿಗೆ ದೂರು ನೀಡುವುದಾಗಿ ಕೇರಳ ಗೃಹ ಸಚಿವ ರಮೇಶ್ ಚನ್ನಿಟಾಲ ಇಛೋಡ್ ಚಾಂಡಿ ಹೇಳಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಪೊಲೀಸರ ನಡೆ ರಾಜ್ಯ ಸರ್ಕಾರದ ಅಧಿಕಾರದ ಉಲ್ಲಂಘನೆಯಾಗಿದೆ. ಹೀಗಾಗಿ ಪ್ರಕರಣ ಸಂಬಂಧ ಶೀಘ್ರದಲ್ಲಿಯೇ ಕೇರಳ ಸರ್ಕಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಪತ್ರ ಬರೆದು ಪ್ರತಿಭಟನೆಯನ್ನು ವ್ಯಕ್ತಪಡಿಸಲಿದೆ ಎಂದು ಹೇಳಿದರು.

ಮಂಗಳವಾರ ಕೇರಳ ಹೌಸ್ ಮೇಲೆ ನಡೆದ ಪೊಲೀಸ್ ದಾಳಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಲವು ರಾಜಕೀಯ ಮುಖಂಡರು ದೆಹಲಿ ಪೊಲೀಸರ ನಡೆಯನ್ನು ವಿರೋಧಿಸಿದ್ದಾರೆ. ಈ  ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟನಿ ಅವರು, ಒಬ್ಬ ವ್ಯಕ್ತಿ ಏನನ್ನು ತಿನ್ನಬೇಕು ಮತ್ತು ಏನನ್ನು ತೊಡಬೇಕು ಎನ್ನುವುದು ಆತನ ಖಾಸಗೀ ನಿರ್ಧಾರವಾಗಿರುತ್ತದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಯಾವುದೇ ಕಾರಣಕ್ಕೆ ಈ ಹಕ್ಕನ್ನು ಉಲ್ಲಂಘಿಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗೋಮಾಂಸ ಭಕ್ಷಣೆ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಗೆ ಗ್ರಾಸವಾದ ದಾದ್ರಿ ಪ್ರಕರಣ ಹಸಿರಾಗಿರುವಾಗಲೇ ಕೇರಳ ಹೌಸ್ ಮೇಲೆ ಪೊಲೀಸ್ ದಾಳಿ ನಡೆದಿದ್ದು,  ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT