ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ 
ದೇಶ

ಕೇರಳ ಹೌಸ್ ದಾಳಿ: ದೆಹಲಿ ಪೊಲೀಸರ ವಿರುದ್ಧ ಕೇರಳ ಸಿಎಂ ವಾಗ್ದಾಳಿ

ಕೇರಳ ಹೌಸ್ ಎಂಬುದು ರಾಜ್ಯದ ಅತಿಥಿ ಗೃಹವೇನೂ ಅಲ್ಲ. ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನನಗೆ ಸಿಗಲಿಲ್ಲ. ಆದರೆ, ದೆಹಲಿ ಪೊಲೀಸರು ದಾಳಿ ನಡೆಸುವ ...

ನವದೆಹಲಿ/ ತಿರುವನಂತಪುರಂ: ದೇಶದ ರಾಜಧಾನಿಯಲ್ಲಿರುವ ಕೇರಳ ಹೌಸ್ ಕ್ಯಾಂಟೀನ್‌ನಲ್ಲಿ ಬೀಫ್ ಬಡಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದಾಳಿ ನಡೆಸಿ ಪರಿಶೋಧನೆ ನಡೆಸಿದ್ದಕ್ಕೆ ಕೇರಳ ಸಿಎಂ ಉಮ್ಮನ್ ಚಾಂಡಿ ಗರಂ ಆಗಿದ್ದಾರೆ.
ಬಲಪಂಥೀಯ ಸಂಘಟನೆಯೊಂದರ ನಾಯಕ ಫೋನಾಯಿಸಿ ಕೇರಳ ಹೌಸ್‌ನಲ್ಲಿ ಬೀಫ್ ಪದಾರ್ಥ ಮಾಡಲಾಗಿದೆ ಎಂದು ದೆಹಲಿ ಪೊಲೀಸರಿಗೆ ದೂರಿದ್ದನು. ಇದನ್ನು ಕೇಳಿದ ಕೂಡಲೇ ದೆಹಲಿ ಪೊಲೀಸರು ಕೇರಳ ಹೌಸ್‌ಗೆ ಬಂದು ಪರಿಶೋಧನೆ ನಡೆಸಿದ್ದರು. ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ,  ಪೊಲೀಸರು ದಾಳಿ ನಡೆಸುವ ಮುನ್ನ ಯೋಚನೆ ಮಾಡಬೇಕಿತ್ತು ಎಂದಿದ್ದಾರೆ.
ಕೇರಳ ಹೌಸ್ ಎಂಬುದು ರಾಜ್ಯದ ಅತಿಥಿ ಗೃಹವೇನೂ ಅಲ್ಲ. ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನನಗೆ ಸಿಗಲಿಲ್ಲ. ಆದರೆ, ದೆಹಲಿ ಪೊಲೀಸರು ದಾಳಿ ನಡೆಸುವ ಮುನ್ನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಬೇಕಿತ್ತು ಎಂದು ಕೋಝಿಕ್ಕೋಡ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಾಂಡಿ ಹೇಳಿದ್ದಾರೆ.
ಈ ವಿಷಯದ ಬಗ್ಗೆ ತಾವು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಿದ್ದೇವೆ ಎಂದು ಚಾಂಡಿ ಹೇಳಿದ್ದಾರೆ.
ಕೇರಳ ಹೌಸ್‌ನ ಮೇಲೆ ದೆಹಲಿ ಪೊಲೀಸರು ದಾಳಿ ಮಾಡುವಂತದ್ದೇನಿತ್ತು? ಬೀಫ್ (ಎತ್ತಿನ ಮಾಂಸ)ವನ್ನು ದೆಹಲಿಯಲ್ಲಿ ನಿಷೇಧ ಮಾಡಿಲ್ಲ ಎಂದು ಕೇರಳದ ಸಂಸದ ರಾಜೇಶ್  ಹೇಳಿದ್ದಾರೆ.
ಪೊಲೀಸರ ದಾಳಿ ಹಿನ್ನೆಲೆಯಲ್ಲಿ ಕೇರಳ ಹೌಸ್ ಮೆನುವಿನಲ್ಲಿ ಬೀಫ್ ಭಕ್ಷ್ಯವನ್ನು ಕೈ ಬಿಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT